Homeಮುಖಪುಟಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

'ನಾನು ಒಂದ್‍ ಹೊಡೆದೆ ಅಂದ್ರೆ ಅಷ್ಟೇ, ಸುಡಾಗಾಡಲ್ಲಿ ನಿಮ್ಮ ಹೆಣ ಇರ್ತದೆ’ ಎಂಬ ಸಿನಿಮಾ ಸಂಭಾಷಣೆಯನ್ನು ಮಿಥುನ್‍ ರಾಜಕೀಯ ವೇದಿಕೆಯಿಂದ ಹೇಳಿದ್ದರು.

- Advertisement -
- Advertisement -

ಏಪ್ರಿಲ್-ಮೇನಲ್ಲಿ ನಡೆದೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದ ಬಾಲಿವುಡ್‍ ಮತ್ತು ಬಂಗಾಳಿ ಸಿನಿಮಾ ನಟ ಮಿಥುನ್ ಚಕ್ರವರ್ತಿಯವರನ್ನು ಕೊಲ್ಕೊತ್ತಾ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬಿಜೆಪಿಎಗೆ ಸೇರಿದ ನಂತರ ಮಾರ್ಚ್ 7ರಂದು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕೊತ್ತಾ ಪೊಲೀಸರು ಅವರನ್ನು ಪ್ರಶ್ನಿಸಿದ್ದಾರೆ.

ಏಪ್ರಿಲ್-ಮೇ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ ಭರ್ಜರಿ ಜಯವನ್ನು ದಾಖಲಿಸಿದ ನಂತರದ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಭಾಷಣವು ಪಾತ್ರ ವಹಿಸಿದೆ ಎಂದು ಎಫ್‍ಐಆರ್‌ನಲ್ಲಿ ಆರೋಪ ಮಾಡಲಾಗಿದೆ.

ಎಫ್‌ಐಆರ್ ರದ್ದು ಮಾಡಬೇಕು ಎಂದು ಮಿಥುನ್ ಚಕ್ರವರ್ತಿ ಕೊಲ್ಕೊತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಮಿಥುನ್‍ ಅವರನ್ನು ಆ ಭಾಷಣದ ಕುರಿತು ಪ್ರಶ್ನಿಸುವಂತೆ ನ್ಯಾಯಾಲಯ ತನಿಖಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ತಮ್ಮ ಭಾಷಣದಲ್ಲಿ ಚಲನಚಿತ್ರ ಸಂಭಾಷಣೆಗಳನ್ನು ಮಾತ್ರ ಹೇಳಿದ್ದೇನೆ ಮತ್ತು ಇವು ಅಕ್ಷರಶಃ ವಾಸ್ತವವಲ್ಲ ಎಂದು ಮಿಥುನ್‍ ಹೇಳಿಕೊಂಡಿದ್ದಾರೆ.

ಅವರ 2006ರ ಚಲನಚಿತ್ರ “ಎಂಎಲ್ಎ ಫಟಕೇಶ್ಟೋ”ದ ಒಂದು ಸಾಲನ್ನು ಎಫ್‍ಐಆರ್ ನಲ್ಲಿದೆ. ‘ನಾನು ಒಂದ್‍ ಹೊಡೆದೆ ಅಂದ್ರೆ ಅಷ್ಟೇ, ಸುಡಾಗಾಡಲ್ಲಿ ನಿಮ್ಮ ಹೆಣ ಇರ್ತದೆ’ ಎಂಬ ಸಿನಿಮಾ ಸಂಭಾಷಣೆಯನ್ನು ಮಿಥುನ್‍ ರಾಜಕೀಯ ವೇದಿಕೆಯಿಂದ ಹೇಳಿದ್ದರು.

ಹುಚ್ಚುಚ್ಚಾಗಿ ಹುರಿದುಂಬಿಸಿದ ಭಾಷಣದಲ್ಲಿ, ಅವರು ಈ ಸಾಲುಗಳನ್ನು ಸಹ ಹೇಳಿದ್ದಾರೆ: “ನಿರುಪದ್ರವ ಹಾವು ಅಂತ ನನ್ನನ್ನು ತಪ್ಪಾಗಿ ಗ್ರಹಿಸಬೇಡಿ, ನಾನು ಶುದ್ಧ ನಾಗರಹಾವು, ಒಮ್ಮೆ ಕಚ್ಚಿದರೆ ನೀವು ಫೋಟೊ ಅಷ್ಟೇ….’’

ಚುನಾವಣಾ ಫಲಿತಾಂಶದ ನಂತರ ಬಂಗಾಳದ ಹಲವಾರು ಭಾಗಗಳಲ್ಲಿ ತೃಣಮೂಲ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಡಿದಾಟಗಳು ನಡೆದವು.

ಹಿಂಸಾಚಾರದಲ್ಲಿ ಕನಿಷ್ಠ 16 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ ತಿಂಗಳು ಹೇಳಿದ್ದರು.


ಇದನ್ನೂ ಓದಿ; ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...