Homeಮುಖಪುಟಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

'ನಾನು ಒಂದ್‍ ಹೊಡೆದೆ ಅಂದ್ರೆ ಅಷ್ಟೇ, ಸುಡಾಗಾಡಲ್ಲಿ ನಿಮ್ಮ ಹೆಣ ಇರ್ತದೆ’ ಎಂಬ ಸಿನಿಮಾ ಸಂಭಾಷಣೆಯನ್ನು ಮಿಥುನ್‍ ರಾಜಕೀಯ ವೇದಿಕೆಯಿಂದ ಹೇಳಿದ್ದರು.

- Advertisement -
- Advertisement -

ಏಪ್ರಿಲ್-ಮೇನಲ್ಲಿ ನಡೆದೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದ ಬಾಲಿವುಡ್‍ ಮತ್ತು ಬಂಗಾಳಿ ಸಿನಿಮಾ ನಟ ಮಿಥುನ್ ಚಕ್ರವರ್ತಿಯವರನ್ನು ಕೊಲ್ಕೊತ್ತಾ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬಿಜೆಪಿಎಗೆ ಸೇರಿದ ನಂತರ ಮಾರ್ಚ್ 7ರಂದು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕೊತ್ತಾ ಪೊಲೀಸರು ಅವರನ್ನು ಪ್ರಶ್ನಿಸಿದ್ದಾರೆ.

ಏಪ್ರಿಲ್-ಮೇ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ ಭರ್ಜರಿ ಜಯವನ್ನು ದಾಖಲಿಸಿದ ನಂತರದ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಭಾಷಣವು ಪಾತ್ರ ವಹಿಸಿದೆ ಎಂದು ಎಫ್‍ಐಆರ್‌ನಲ್ಲಿ ಆರೋಪ ಮಾಡಲಾಗಿದೆ.

ಎಫ್‌ಐಆರ್ ರದ್ದು ಮಾಡಬೇಕು ಎಂದು ಮಿಥುನ್ ಚಕ್ರವರ್ತಿ ಕೊಲ್ಕೊತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಮಿಥುನ್‍ ಅವರನ್ನು ಆ ಭಾಷಣದ ಕುರಿತು ಪ್ರಶ್ನಿಸುವಂತೆ ನ್ಯಾಯಾಲಯ ತನಿಖಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ತಮ್ಮ ಭಾಷಣದಲ್ಲಿ ಚಲನಚಿತ್ರ ಸಂಭಾಷಣೆಗಳನ್ನು ಮಾತ್ರ ಹೇಳಿದ್ದೇನೆ ಮತ್ತು ಇವು ಅಕ್ಷರಶಃ ವಾಸ್ತವವಲ್ಲ ಎಂದು ಮಿಥುನ್‍ ಹೇಳಿಕೊಂಡಿದ್ದಾರೆ.

ಅವರ 2006ರ ಚಲನಚಿತ್ರ “ಎಂಎಲ್ಎ ಫಟಕೇಶ್ಟೋ”ದ ಒಂದು ಸಾಲನ್ನು ಎಫ್‍ಐಆರ್ ನಲ್ಲಿದೆ. ‘ನಾನು ಒಂದ್‍ ಹೊಡೆದೆ ಅಂದ್ರೆ ಅಷ್ಟೇ, ಸುಡಾಗಾಡಲ್ಲಿ ನಿಮ್ಮ ಹೆಣ ಇರ್ತದೆ’ ಎಂಬ ಸಿನಿಮಾ ಸಂಭಾಷಣೆಯನ್ನು ಮಿಥುನ್‍ ರಾಜಕೀಯ ವೇದಿಕೆಯಿಂದ ಹೇಳಿದ್ದರು.

ಹುಚ್ಚುಚ್ಚಾಗಿ ಹುರಿದುಂಬಿಸಿದ ಭಾಷಣದಲ್ಲಿ, ಅವರು ಈ ಸಾಲುಗಳನ್ನು ಸಹ ಹೇಳಿದ್ದಾರೆ: “ನಿರುಪದ್ರವ ಹಾವು ಅಂತ ನನ್ನನ್ನು ತಪ್ಪಾಗಿ ಗ್ರಹಿಸಬೇಡಿ, ನಾನು ಶುದ್ಧ ನಾಗರಹಾವು, ಒಮ್ಮೆ ಕಚ್ಚಿದರೆ ನೀವು ಫೋಟೊ ಅಷ್ಟೇ….’’

ಚುನಾವಣಾ ಫಲಿತಾಂಶದ ನಂತರ ಬಂಗಾಳದ ಹಲವಾರು ಭಾಗಗಳಲ್ಲಿ ತೃಣಮೂಲ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಡಿದಾಟಗಳು ನಡೆದವು.

ಹಿಂಸಾಚಾರದಲ್ಲಿ ಕನಿಷ್ಠ 16 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ ತಿಂಗಳು ಹೇಳಿದ್ದರು.


ಇದನ್ನೂ ಓದಿ; ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....