Homeಮುಖಪುಟತೆಲಂಗಾಣ ಸಚಿವೆ ವಿರುದ್ಧ ಮೊಕದ್ದಮೆ ಹೂಡಿದ ನಟ ನಾಗಾರ್ಜುನ!

ತೆಲಂಗಾಣ ಸಚಿವೆ ವಿರುದ್ಧ ಮೊಕದ್ದಮೆ ಹೂಡಿದ ನಟ ನಾಗಾರ್ಜುನ!

- Advertisement -
- Advertisement -

ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಅವರು ತೆಲಂಗಾಣದ ಕಾಂಗ್ರೆಸ್ ಸಚಿವೆ ಕೊಂಡಾ ಸುರೇಖಾ ವಿರುದ್ಧ ನಾಂಪಲ್ಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮತ್ತು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದ ಬಗ್ಗೆ ಸಚಿವೆ ಇತ್ತೀಚಿಗೆ ಗಂಭೀರ ಆರೋಪ ಮಾಡಿದ್ದು. ಮೊಕದ್ದಮೆ ದಾಖಲಿಸಿರುವ ಪ್ರತಿಯನ್ನು ನಾಗಾರ್ಜುನ ಅವರ ಮಗ ಚೈತನ್ಯ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ತೆಲಂಗಾಣ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಕಿನೇನಿ ಕುಟುಂಬದ ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಕೊಂಡಾ ಸುರೇಖಾ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ನಾಗಾರ್ಜುನ ತಮ್ಮ ಕಾನೂನು ದೂರಿನಲ್ಲಿ ಆರೋಪಿಸಿದ್ದಾರೆ. ಮೊಕದ್ದಮೆಯು ಕ್ರಿಮಿನಲ್ ಮಾನನಷ್ಟದ ಆರೋಪಗಳನ್ನು ಒಳಗೊಂಡಿದೆ.

ತೆಲಂಗಾಣದ ಅರಣ್ಯ ಮತ್ತು ಪರಿಸರ ಸಚಿವೆ ಕೊಂಡ ಸುರೇಖಾ ಅವರು ಬಿಆರ್‌ಎಸ್ ನಾಯಕ ಕೆಟಿಆರ್ ಮಾದಕ ವ್ಯಸನಿಯಾಗಿದ್ದು, ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದರು. ತೆಲಂಗಾಣ ಸಚಿವೆ

ಇದನ್ನೂಓದಿ: Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

“ಮಾದಕ ವ್ಯಸನಿಯಾಗಿರುವ ಕೆಟಿಆರ್‌ ಅವರು ನಾಗಾರ್ಜುನ ಅವರ ಕನ್ವೆನ್ಷನ್ ಸೆಂಟರ್‌ವೊಂದನ್ನು ಕೆಡವದೆ ಇರಲು ಸಮಂತಾ ಅವರನ್ನು ಲೈಂಗಿಕವಾಗಿ ಬಯಸಿದ್ದರು. ಅದಕ್ಕೆ ಒಪ್ಪಿದ್ದ ನಾಗಾರ್ಜುನ ಅವರು ಸಮಂತಾ ಅವರನ್ನು ಕೆಟಿಆರ್ ಬಳಿ ತೆರಳಲು ಕೇಳಿಕೊಂಡಿದ್ದರು. ಆದರೆ ಇದಕ್ಕೆ ಒಪ್ಪದ ಸಮಂತ ಅವರು ವಿಚ್ಛೇದನ ಪಡೆದಿದ್ದರು” ಎಂದು ಸಚಿವೆ ಆರೋಪಿಸಿದ್ದರು. ಸಚಿವರ ಈ ಹೇಳಿಕೆ ತೆಲಂಗಾಣ ರಾಜಕೀಯದಲ್ಲಿ ಭಾರಿ ವಿವಾದ ಉಂಟಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವರು, ಕೆಟಿಆರ್, ಅಕ್ಕಿನೇನಿ ಕುಟುಂಬ ಮತ್ತು ಸಮಂತಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಕೆಟಿಆರ್ ಅವರ ಒಳಗೊಳ್ಳುವಿಕೆಯಿಂದಾಗಿ ತೆಲುಗು ಚಿತ್ರರಂಗದ ಅನೇಕ ಮಹಿಳಾ ನಟರು ತಮ್ಮ ವೃತ್ತಿಜೀವನವನ್ನು ಮೊಟಕುಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಇದನ್ನೂಓದಿ: ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ಸಚಿವರ ಹೇಳಿಕೆಯನ್ನು ನಾಗಾರ್ಜುನ ಖಂಡಿಸಿದ್ದು, ಅವರ ಹೇಳಿಕೆಗಳು ಸಂಪೂರ್ಣವಾಗಿ “ಅಪ್ರಸ್ತುತ ಮತ್ತು ಸುಳ್ಳು” ಎಂದು ಪ್ರತಿಪಾದಿಸಿದ್ದಾರೆ. ಈ ವೇಳೆ ಅವರು ಜನರ ಖಾಸಗಿತನವನ್ನು ಗೌರವಿಸುವಂತೆ ಸಚಿವರನ್ನು ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಸಚಿವೆ ಶ್ರೀಮತಿ ಕೊಂಡ ಸುರೇಖಾ ಅವರ ಹೇಳಿಕೆಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ರಾಜಕೀಯದಿಂದ ದೂರವಿರುವ ಚಲನಚಿತ್ರ ತಾರೆಯರ ಜೀವನವನ್ನು ನಿಮ್ಮ ವಿರೋಧಿಗಳನ್ನು ಟೀಕಿಸಲು ಬಳಸಬೇಡಿ. ದಯವಿಟ್ಟು ಇತರರ ಖಾಸಗಿತನವನ್ನು ಗೌರವಿಸಿ” ಎಂದು ನಟ ತೆಲುಗಿನಲ್ಲಿ ಟ್ವೀಟ್ ಮಾಡಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ 2021 ರಲ್ಲಿ ತಮ್ಮ ವಿಚ್ಛೇದನವನ್ನು ಸಾರ್ವಜನಿಕವಾಗಿ ಘೋಷಿಸಿದ್ದರು, ನಂತರ ಅವರು ವಿಚ್ಛೇದನ ಪಡೆದರು. ಅದರ ನಂತರ ನಾಗ ಚೈತನ್ಯ ಅವರು ಈ ವರ್ಷದ ಆಗಸ್ಟ್‌ನಲ್ಲಿ ನಟಿ ಸೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...