Homeಮುಖಪುಟರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

- Advertisement -
- Advertisement -

ತಿರುವನಂತಪುರಂ: ಐದು ನೂರಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ, ಎರಡು ಭಾರಿ ರಾಷ್ಟ್ರ ಪ್ರಶಸ್ತಿಗಳನ್ನು, ಹಲವಾರು ಭಾರಿ ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದ ಪ್ರತಿಭಾನ್ವಿತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಬಳಿಕ ಅವರು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದರು.

ಅಲಪ್ಪುಜ ನೆಡುಮುಡಿಯಲ್ಲಿ ಪಿ.ಕೆ.ಕೇಶವನ್ ಪಿಳ್ಳೈ ಮತ್ತು ಪಿ.ಕುಂಜಿಕುಟ್ಟಿಯಮ್ಮ ದಂಪತಿಗೆ ಜನಿಸಿದ ಐದು ಮಕ್ಕಳಲ್ಲಿ ಒಬ್ಬರಾದ ವೇಣು ಅವರು 1978ರಲ್ಲಿ ಜಿ.ಅರವಿಂದನ್ ನಿರ್ದೇಶನದ ‘ಥಂಪು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ನೆಡುಮುಡಿ ವೇಣು ಎಂದು ಪ್ರೀತಿಯಿಂದ ಕರೆಯಲ್ಪಡುವ ಕೇಶವನ್ ವೇಣುಗೋಪಾಲ್ ನಾಯರ್ ಅವರು ರಂಗಭೂಮಿಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಬಳಿಕ ಚಲನಚಿತ್ರಗಳಲ್ಲಿ ನಟಿಸಿದರು. ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

“ಎಲ್ಲರೂ ಒಟ್ಟಾಗಿ ಕೊರೊನಾವನ್ನು ಸೋಲಿಸೋಣ, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ” ಎಂದು ಅವರು ಹಾಡಿರುವ 90 ಸೆಕೆಂಡುಗಳ ಹಾಡು ಇತ್ತೀಚೆಗೆ ವೈರಲ್‌ ಆಗಿತ್ತು. ಈ ಹಾಡನ್ನು ಕೇರಳ ಪೊಲೀಸರು ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ ಅಪ್‌ಲೋಡ್ ಮಾಡಿದ ನಂತರ ಜನಪ್ರಿಯವಾಗಿತ್ತು. ಜಗತ್ತಿನಾದ್ಯಂತ ಇರುವ ನೆಟಿಜನ್‌ಗಳು ಮತ್ತು ಮಲಯಾಳಿಗಳು ವ್ಯಾಪಕವಾಗಿ ಈ ಹಾಡನ್ನು ಹಂಚಿಕೊಂಡಿದ್ದರು.

ಅಲಪ್ಪುಜದ ಸನಾತನ ಧರ್ಮ ಕಾಲೇಜಿನಲ್ಲಿ ಪದವಿ ಪಡೆದ ನಂತರ, ವೇಣು ಅವರು ಕೆಲಕಾಲ ಕಲಕೌಮುಡಿಯಲ್ಲಿ ಪತ್ರಕರ್ತರಾಗಿ, ಸಂಸ್ಥೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದರು. ‘ಕಟ್ಟತೆ ಕಿಲಿಗೂಡು’, ‘ತೀರ್ಥಂ’, ‘ಶ್ರುತಿ’, ‘ಅಂಬದ ಜ್ಞಾನೆ’, ‘ಒರು ಕಥಾ ಒರು ನನ್ನಕ್ಕಥಾ’, ‘ಸವಿದಂ’ ಮತ್ತು ‘ಅಂಗನೆ ಒರು ಅವಧಿಕಾಲತ್ತ’ ಮುಂತಾದ ಸಿನಿಮಾಗಳಿಗೆ ಅವರು ಸ್ಕ್ರಿಪ್ಟ್ ಬರೆದಿದ್ದಾರೆ. ಅವರು ‘ಪೂರಂ’ ಹೆಸರಿನ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ.

ಕಮಲ್ ಹಾಸನ್ ಅಭಿಯನದ ‘ಇಂಡಿಯನ್‌’, ವಿಕ್ರಮ್ ಅಭಿನಯದ ‘ಅನ್ನಿಯನ್’ ಸಿನಿಮಾಗಳಲ್ಲಿ ಅಭಿನಯಿಸಿದ ನೆಡುಮುಡಿ ವೇಣು ಅವರಿಗೆ ತಮಿಳು ಚಿತ್ರರಂಗದಲ್ಲಿ ಅಭಿಮಾನಿಗಳು ಸೃಷ್ಟಿಯಾದರು. ಬಳಿಕ ಅವರು ‘ಮೊಗಾಮುಲ್’ (1995) ಮತ್ತು ‘ಸರ್ವಂ ತಾಳ ಮಯಂ’ (2019) ಸಿನಿಮಾಗಳಲ್ಲಿ ಅಭಿನಯಿಸಿದರು.

ಜೀನತ್ ಅಮಾನ್, ವಿಕ್ಟರ್ ಬ್ಯಾನರ್ಜಿ ಮತ್ತು ರೂಪಾ ಗಂಗೂಲಿ ಅವರೊಂದಿಗೆ  ಇಂಗ್ಲಿಷ್ ಭಾಷೆಯ ‘ಚೌರಾಹೆನ್’ ಚಿತ್ರದಲ್ಲೂಅವರು ಅಭಿನಯಿಸಿದರು. ಸೆಪ್ಟೆಂಬರ್ 2007ರಲ್ಲಿ ಜಿಂಬಾಬ್ವೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಸೈರಾ’ ಚಿತ್ರದ ಪಾತ್ರಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡರು.

1980ರಲ್ಲಿ ‘ಚಾಮರಂ’ಗಾಗಿ ಅವರು ತಮ್ಮ ಮೊದಲ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು (ಎರಡನೇ ಅತ್ಯುತ್ತಮ ನಟ) ಪಡೆದರು. 1981ರಲ್ಲಿ ‘ವಿದಾಪರಯುಂ ಮುನ್ಪೆ’ ಸಿನಿಮಾಕ್ಕಾಗಿ ‘ಅತ್ಯುತ್ತಮ ನಟ’, 1987ರಲ್ಲಿ ‘ಒರು ಮಿನ್ನಮಿನುಂಗಿಂತೆ ನೂರುಂಗುವೆಟ್ಟಂ’  ಸಿನಿಮಾ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದರು.

“ನೆಡುಮುಡಿ ವೇಣು ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಮಲಯಾಳಂನಲ್ಲಿ ನೆಡುಮುಡಿಯವರ ಸ್ಥಾನವನ್ನು ತುಂಬಲು ಯಾವುದೇ ಕಲಾವಿದರಿಗೆ ಸಾಧ್ಯವಿಲ್ಲ. ಸಿನಿಮಾ ಸೆಟ್‌ಗಳಲ್ಲಿ ಅವರು ಇದ್ದರೆಂದರೆ ವಿಶೇಷ ಶಕ್ತಿ ಸಂಚಲನವಾಗುತ್ತಿತ್ತು” ಎಂದು ನಟ ಮಣಿಯನ್ ಪಿಳ್ಳೈ ರಾಜು ಹೇಳಿದ್ದಾರೆ.

 ಇದನ್ನೂ ಓದಿರಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...