Homeಮುಖಪುಟರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

- Advertisement -
- Advertisement -

ತಿರುವನಂತಪುರಂ: ಐದು ನೂರಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ, ಎರಡು ಭಾರಿ ರಾಷ್ಟ್ರ ಪ್ರಶಸ್ತಿಗಳನ್ನು, ಹಲವಾರು ಭಾರಿ ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದ ಪ್ರತಿಭಾನ್ವಿತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಬಳಿಕ ಅವರು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದರು.

ಅಲಪ್ಪುಜ ನೆಡುಮುಡಿಯಲ್ಲಿ ಪಿ.ಕೆ.ಕೇಶವನ್ ಪಿಳ್ಳೈ ಮತ್ತು ಪಿ.ಕುಂಜಿಕುಟ್ಟಿಯಮ್ಮ ದಂಪತಿಗೆ ಜನಿಸಿದ ಐದು ಮಕ್ಕಳಲ್ಲಿ ಒಬ್ಬರಾದ ವೇಣು ಅವರು 1978ರಲ್ಲಿ ಜಿ.ಅರವಿಂದನ್ ನಿರ್ದೇಶನದ ‘ಥಂಪು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ನೆಡುಮುಡಿ ವೇಣು ಎಂದು ಪ್ರೀತಿಯಿಂದ ಕರೆಯಲ್ಪಡುವ ಕೇಶವನ್ ವೇಣುಗೋಪಾಲ್ ನಾಯರ್ ಅವರು ರಂಗಭೂಮಿಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಬಳಿಕ ಚಲನಚಿತ್ರಗಳಲ್ಲಿ ನಟಿಸಿದರು. ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

“ಎಲ್ಲರೂ ಒಟ್ಟಾಗಿ ಕೊರೊನಾವನ್ನು ಸೋಲಿಸೋಣ, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ” ಎಂದು ಅವರು ಹಾಡಿರುವ 90 ಸೆಕೆಂಡುಗಳ ಹಾಡು ಇತ್ತೀಚೆಗೆ ವೈರಲ್‌ ಆಗಿತ್ತು. ಈ ಹಾಡನ್ನು ಕೇರಳ ಪೊಲೀಸರು ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ ಅಪ್‌ಲೋಡ್ ಮಾಡಿದ ನಂತರ ಜನಪ್ರಿಯವಾಗಿತ್ತು. ಜಗತ್ತಿನಾದ್ಯಂತ ಇರುವ ನೆಟಿಜನ್‌ಗಳು ಮತ್ತು ಮಲಯಾಳಿಗಳು ವ್ಯಾಪಕವಾಗಿ ಈ ಹಾಡನ್ನು ಹಂಚಿಕೊಂಡಿದ್ದರು.

ಅಲಪ್ಪುಜದ ಸನಾತನ ಧರ್ಮ ಕಾಲೇಜಿನಲ್ಲಿ ಪದವಿ ಪಡೆದ ನಂತರ, ವೇಣು ಅವರು ಕೆಲಕಾಲ ಕಲಕೌಮುಡಿಯಲ್ಲಿ ಪತ್ರಕರ್ತರಾಗಿ, ಸಂಸ್ಥೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದರು. ‘ಕಟ್ಟತೆ ಕಿಲಿಗೂಡು’, ‘ತೀರ್ಥಂ’, ‘ಶ್ರುತಿ’, ‘ಅಂಬದ ಜ್ಞಾನೆ’, ‘ಒರು ಕಥಾ ಒರು ನನ್ನಕ್ಕಥಾ’, ‘ಸವಿದಂ’ ಮತ್ತು ‘ಅಂಗನೆ ಒರು ಅವಧಿಕಾಲತ್ತ’ ಮುಂತಾದ ಸಿನಿಮಾಗಳಿಗೆ ಅವರು ಸ್ಕ್ರಿಪ್ಟ್ ಬರೆದಿದ್ದಾರೆ. ಅವರು ‘ಪೂರಂ’ ಹೆಸರಿನ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ.

ಕಮಲ್ ಹಾಸನ್ ಅಭಿಯನದ ‘ಇಂಡಿಯನ್‌’, ವಿಕ್ರಮ್ ಅಭಿನಯದ ‘ಅನ್ನಿಯನ್’ ಸಿನಿಮಾಗಳಲ್ಲಿ ಅಭಿನಯಿಸಿದ ನೆಡುಮುಡಿ ವೇಣು ಅವರಿಗೆ ತಮಿಳು ಚಿತ್ರರಂಗದಲ್ಲಿ ಅಭಿಮಾನಿಗಳು ಸೃಷ್ಟಿಯಾದರು. ಬಳಿಕ ಅವರು ‘ಮೊಗಾಮುಲ್’ (1995) ಮತ್ತು ‘ಸರ್ವಂ ತಾಳ ಮಯಂ’ (2019) ಸಿನಿಮಾಗಳಲ್ಲಿ ಅಭಿನಯಿಸಿದರು.

ಜೀನತ್ ಅಮಾನ್, ವಿಕ್ಟರ್ ಬ್ಯಾನರ್ಜಿ ಮತ್ತು ರೂಪಾ ಗಂಗೂಲಿ ಅವರೊಂದಿಗೆ  ಇಂಗ್ಲಿಷ್ ಭಾಷೆಯ ‘ಚೌರಾಹೆನ್’ ಚಿತ್ರದಲ್ಲೂಅವರು ಅಭಿನಯಿಸಿದರು. ಸೆಪ್ಟೆಂಬರ್ 2007ರಲ್ಲಿ ಜಿಂಬಾಬ್ವೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಸೈರಾ’ ಚಿತ್ರದ ಪಾತ್ರಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡರು.

1980ರಲ್ಲಿ ‘ಚಾಮರಂ’ಗಾಗಿ ಅವರು ತಮ್ಮ ಮೊದಲ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು (ಎರಡನೇ ಅತ್ಯುತ್ತಮ ನಟ) ಪಡೆದರು. 1981ರಲ್ಲಿ ‘ವಿದಾಪರಯುಂ ಮುನ್ಪೆ’ ಸಿನಿಮಾಕ್ಕಾಗಿ ‘ಅತ್ಯುತ್ತಮ ನಟ’, 1987ರಲ್ಲಿ ‘ಒರು ಮಿನ್ನಮಿನುಂಗಿಂತೆ ನೂರುಂಗುವೆಟ್ಟಂ’  ಸಿನಿಮಾ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದರು.

“ನೆಡುಮುಡಿ ವೇಣು ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಮಲಯಾಳಂನಲ್ಲಿ ನೆಡುಮುಡಿಯವರ ಸ್ಥಾನವನ್ನು ತುಂಬಲು ಯಾವುದೇ ಕಲಾವಿದರಿಗೆ ಸಾಧ್ಯವಿಲ್ಲ. ಸಿನಿಮಾ ಸೆಟ್‌ಗಳಲ್ಲಿ ಅವರು ಇದ್ದರೆಂದರೆ ವಿಶೇಷ ಶಕ್ತಿ ಸಂಚಲನವಾಗುತ್ತಿತ್ತು” ಎಂದು ನಟ ಮಣಿಯನ್ ಪಿಳ್ಳೈ ರಾಜು ಹೇಳಿದ್ದಾರೆ.

 ಇದನ್ನೂ ಓದಿರಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...