Homeಮುಖಪುಟರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

- Advertisement -
- Advertisement -

ತಿರುವನಂತಪುರಂ: ಐದು ನೂರಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ, ಎರಡು ಭಾರಿ ರಾಷ್ಟ್ರ ಪ್ರಶಸ್ತಿಗಳನ್ನು, ಹಲವಾರು ಭಾರಿ ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದ ಪ್ರತಿಭಾನ್ವಿತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಬಳಿಕ ಅವರು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದರು.

ಅಲಪ್ಪುಜ ನೆಡುಮುಡಿಯಲ್ಲಿ ಪಿ.ಕೆ.ಕೇಶವನ್ ಪಿಳ್ಳೈ ಮತ್ತು ಪಿ.ಕುಂಜಿಕುಟ್ಟಿಯಮ್ಮ ದಂಪತಿಗೆ ಜನಿಸಿದ ಐದು ಮಕ್ಕಳಲ್ಲಿ ಒಬ್ಬರಾದ ವೇಣು ಅವರು 1978ರಲ್ಲಿ ಜಿ.ಅರವಿಂದನ್ ನಿರ್ದೇಶನದ ‘ಥಂಪು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ನೆಡುಮುಡಿ ವೇಣು ಎಂದು ಪ್ರೀತಿಯಿಂದ ಕರೆಯಲ್ಪಡುವ ಕೇಶವನ್ ವೇಣುಗೋಪಾಲ್ ನಾಯರ್ ಅವರು ರಂಗಭೂಮಿಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಬಳಿಕ ಚಲನಚಿತ್ರಗಳಲ್ಲಿ ನಟಿಸಿದರು. ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

“ಎಲ್ಲರೂ ಒಟ್ಟಾಗಿ ಕೊರೊನಾವನ್ನು ಸೋಲಿಸೋಣ, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ” ಎಂದು ಅವರು ಹಾಡಿರುವ 90 ಸೆಕೆಂಡುಗಳ ಹಾಡು ಇತ್ತೀಚೆಗೆ ವೈರಲ್‌ ಆಗಿತ್ತು. ಈ ಹಾಡನ್ನು ಕೇರಳ ಪೊಲೀಸರು ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ ಅಪ್‌ಲೋಡ್ ಮಾಡಿದ ನಂತರ ಜನಪ್ರಿಯವಾಗಿತ್ತು. ಜಗತ್ತಿನಾದ್ಯಂತ ಇರುವ ನೆಟಿಜನ್‌ಗಳು ಮತ್ತು ಮಲಯಾಳಿಗಳು ವ್ಯಾಪಕವಾಗಿ ಈ ಹಾಡನ್ನು ಹಂಚಿಕೊಂಡಿದ್ದರು.

ಅಲಪ್ಪುಜದ ಸನಾತನ ಧರ್ಮ ಕಾಲೇಜಿನಲ್ಲಿ ಪದವಿ ಪಡೆದ ನಂತರ, ವೇಣು ಅವರು ಕೆಲಕಾಲ ಕಲಕೌಮುಡಿಯಲ್ಲಿ ಪತ್ರಕರ್ತರಾಗಿ, ಸಂಸ್ಥೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದರು. ‘ಕಟ್ಟತೆ ಕಿಲಿಗೂಡು’, ‘ತೀರ್ಥಂ’, ‘ಶ್ರುತಿ’, ‘ಅಂಬದ ಜ್ಞಾನೆ’, ‘ಒರು ಕಥಾ ಒರು ನನ್ನಕ್ಕಥಾ’, ‘ಸವಿದಂ’ ಮತ್ತು ‘ಅಂಗನೆ ಒರು ಅವಧಿಕಾಲತ್ತ’ ಮುಂತಾದ ಸಿನಿಮಾಗಳಿಗೆ ಅವರು ಸ್ಕ್ರಿಪ್ಟ್ ಬರೆದಿದ್ದಾರೆ. ಅವರು ‘ಪೂರಂ’ ಹೆಸರಿನ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ.

ಕಮಲ್ ಹಾಸನ್ ಅಭಿಯನದ ‘ಇಂಡಿಯನ್‌’, ವಿಕ್ರಮ್ ಅಭಿನಯದ ‘ಅನ್ನಿಯನ್’ ಸಿನಿಮಾಗಳಲ್ಲಿ ಅಭಿನಯಿಸಿದ ನೆಡುಮುಡಿ ವೇಣು ಅವರಿಗೆ ತಮಿಳು ಚಿತ್ರರಂಗದಲ್ಲಿ ಅಭಿಮಾನಿಗಳು ಸೃಷ್ಟಿಯಾದರು. ಬಳಿಕ ಅವರು ‘ಮೊಗಾಮುಲ್’ (1995) ಮತ್ತು ‘ಸರ್ವಂ ತಾಳ ಮಯಂ’ (2019) ಸಿನಿಮಾಗಳಲ್ಲಿ ಅಭಿನಯಿಸಿದರು.

ಜೀನತ್ ಅಮಾನ್, ವಿಕ್ಟರ್ ಬ್ಯಾನರ್ಜಿ ಮತ್ತು ರೂಪಾ ಗಂಗೂಲಿ ಅವರೊಂದಿಗೆ  ಇಂಗ್ಲಿಷ್ ಭಾಷೆಯ ‘ಚೌರಾಹೆನ್’ ಚಿತ್ರದಲ್ಲೂಅವರು ಅಭಿನಯಿಸಿದರು. ಸೆಪ್ಟೆಂಬರ್ 2007ರಲ್ಲಿ ಜಿಂಬಾಬ್ವೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಸೈರಾ’ ಚಿತ್ರದ ಪಾತ್ರಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡರು.

1980ರಲ್ಲಿ ‘ಚಾಮರಂ’ಗಾಗಿ ಅವರು ತಮ್ಮ ಮೊದಲ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು (ಎರಡನೇ ಅತ್ಯುತ್ತಮ ನಟ) ಪಡೆದರು. 1981ರಲ್ಲಿ ‘ವಿದಾಪರಯುಂ ಮುನ್ಪೆ’ ಸಿನಿಮಾಕ್ಕಾಗಿ ‘ಅತ್ಯುತ್ತಮ ನಟ’, 1987ರಲ್ಲಿ ‘ಒರು ಮಿನ್ನಮಿನುಂಗಿಂತೆ ನೂರುಂಗುವೆಟ್ಟಂ’  ಸಿನಿಮಾ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದರು.

“ನೆಡುಮುಡಿ ವೇಣು ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಮಲಯಾಳಂನಲ್ಲಿ ನೆಡುಮುಡಿಯವರ ಸ್ಥಾನವನ್ನು ತುಂಬಲು ಯಾವುದೇ ಕಲಾವಿದರಿಗೆ ಸಾಧ್ಯವಿಲ್ಲ. ಸಿನಿಮಾ ಸೆಟ್‌ಗಳಲ್ಲಿ ಅವರು ಇದ್ದರೆಂದರೆ ವಿಶೇಷ ಶಕ್ತಿ ಸಂಚಲನವಾಗುತ್ತಿತ್ತು” ಎಂದು ನಟ ಮಣಿಯನ್ ಪಿಳ್ಳೈ ರಾಜು ಹೇಳಿದ್ದಾರೆ.

 ಇದನ್ನೂ ಓದಿರಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...