Homeಮುಖಪುಟರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

- Advertisement -
- Advertisement -

ತಿರುವನಂತಪುರಂ: ಐದು ನೂರಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ, ಎರಡು ಭಾರಿ ರಾಷ್ಟ್ರ ಪ್ರಶಸ್ತಿಗಳನ್ನು, ಹಲವಾರು ಭಾರಿ ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದ ಪ್ರತಿಭಾನ್ವಿತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಬಳಿಕ ಅವರು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದರು.

ಅಲಪ್ಪುಜ ನೆಡುಮುಡಿಯಲ್ಲಿ ಪಿ.ಕೆ.ಕೇಶವನ್ ಪಿಳ್ಳೈ ಮತ್ತು ಪಿ.ಕುಂಜಿಕುಟ್ಟಿಯಮ್ಮ ದಂಪತಿಗೆ ಜನಿಸಿದ ಐದು ಮಕ್ಕಳಲ್ಲಿ ಒಬ್ಬರಾದ ವೇಣು ಅವರು 1978ರಲ್ಲಿ ಜಿ.ಅರವಿಂದನ್ ನಿರ್ದೇಶನದ ‘ಥಂಪು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ನೆಡುಮುಡಿ ವೇಣು ಎಂದು ಪ್ರೀತಿಯಿಂದ ಕರೆಯಲ್ಪಡುವ ಕೇಶವನ್ ವೇಣುಗೋಪಾಲ್ ನಾಯರ್ ಅವರು ರಂಗಭೂಮಿಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಬಳಿಕ ಚಲನಚಿತ್ರಗಳಲ್ಲಿ ನಟಿಸಿದರು. ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

“ಎಲ್ಲರೂ ಒಟ್ಟಾಗಿ ಕೊರೊನಾವನ್ನು ಸೋಲಿಸೋಣ, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ” ಎಂದು ಅವರು ಹಾಡಿರುವ 90 ಸೆಕೆಂಡುಗಳ ಹಾಡು ಇತ್ತೀಚೆಗೆ ವೈರಲ್‌ ಆಗಿತ್ತು. ಈ ಹಾಡನ್ನು ಕೇರಳ ಪೊಲೀಸರು ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ ಅಪ್‌ಲೋಡ್ ಮಾಡಿದ ನಂತರ ಜನಪ್ರಿಯವಾಗಿತ್ತು. ಜಗತ್ತಿನಾದ್ಯಂತ ಇರುವ ನೆಟಿಜನ್‌ಗಳು ಮತ್ತು ಮಲಯಾಳಿಗಳು ವ್ಯಾಪಕವಾಗಿ ಈ ಹಾಡನ್ನು ಹಂಚಿಕೊಂಡಿದ್ದರು.

ಅಲಪ್ಪುಜದ ಸನಾತನ ಧರ್ಮ ಕಾಲೇಜಿನಲ್ಲಿ ಪದವಿ ಪಡೆದ ನಂತರ, ವೇಣು ಅವರು ಕೆಲಕಾಲ ಕಲಕೌಮುಡಿಯಲ್ಲಿ ಪತ್ರಕರ್ತರಾಗಿ, ಸಂಸ್ಥೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದರು. ‘ಕಟ್ಟತೆ ಕಿಲಿಗೂಡು’, ‘ತೀರ್ಥಂ’, ‘ಶ್ರುತಿ’, ‘ಅಂಬದ ಜ್ಞಾನೆ’, ‘ಒರು ಕಥಾ ಒರು ನನ್ನಕ್ಕಥಾ’, ‘ಸವಿದಂ’ ಮತ್ತು ‘ಅಂಗನೆ ಒರು ಅವಧಿಕಾಲತ್ತ’ ಮುಂತಾದ ಸಿನಿಮಾಗಳಿಗೆ ಅವರು ಸ್ಕ್ರಿಪ್ಟ್ ಬರೆದಿದ್ದಾರೆ. ಅವರು ‘ಪೂರಂ’ ಹೆಸರಿನ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ.

ಕಮಲ್ ಹಾಸನ್ ಅಭಿಯನದ ‘ಇಂಡಿಯನ್‌’, ವಿಕ್ರಮ್ ಅಭಿನಯದ ‘ಅನ್ನಿಯನ್’ ಸಿನಿಮಾಗಳಲ್ಲಿ ಅಭಿನಯಿಸಿದ ನೆಡುಮುಡಿ ವೇಣು ಅವರಿಗೆ ತಮಿಳು ಚಿತ್ರರಂಗದಲ್ಲಿ ಅಭಿಮಾನಿಗಳು ಸೃಷ್ಟಿಯಾದರು. ಬಳಿಕ ಅವರು ‘ಮೊಗಾಮುಲ್’ (1995) ಮತ್ತು ‘ಸರ್ವಂ ತಾಳ ಮಯಂ’ (2019) ಸಿನಿಮಾಗಳಲ್ಲಿ ಅಭಿನಯಿಸಿದರು.

ಜೀನತ್ ಅಮಾನ್, ವಿಕ್ಟರ್ ಬ್ಯಾನರ್ಜಿ ಮತ್ತು ರೂಪಾ ಗಂಗೂಲಿ ಅವರೊಂದಿಗೆ  ಇಂಗ್ಲಿಷ್ ಭಾಷೆಯ ‘ಚೌರಾಹೆನ್’ ಚಿತ್ರದಲ್ಲೂಅವರು ಅಭಿನಯಿಸಿದರು. ಸೆಪ್ಟೆಂಬರ್ 2007ರಲ್ಲಿ ಜಿಂಬಾಬ್ವೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಸೈರಾ’ ಚಿತ್ರದ ಪಾತ್ರಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡರು.

1980ರಲ್ಲಿ ‘ಚಾಮರಂ’ಗಾಗಿ ಅವರು ತಮ್ಮ ಮೊದಲ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು (ಎರಡನೇ ಅತ್ಯುತ್ತಮ ನಟ) ಪಡೆದರು. 1981ರಲ್ಲಿ ‘ವಿದಾಪರಯುಂ ಮುನ್ಪೆ’ ಸಿನಿಮಾಕ್ಕಾಗಿ ‘ಅತ್ಯುತ್ತಮ ನಟ’, 1987ರಲ್ಲಿ ‘ಒರು ಮಿನ್ನಮಿನುಂಗಿಂತೆ ನೂರುಂಗುವೆಟ್ಟಂ’  ಸಿನಿಮಾ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದರು.

“ನೆಡುಮುಡಿ ವೇಣು ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಮಲಯಾಳಂನಲ್ಲಿ ನೆಡುಮುಡಿಯವರ ಸ್ಥಾನವನ್ನು ತುಂಬಲು ಯಾವುದೇ ಕಲಾವಿದರಿಗೆ ಸಾಧ್ಯವಿಲ್ಲ. ಸಿನಿಮಾ ಸೆಟ್‌ಗಳಲ್ಲಿ ಅವರು ಇದ್ದರೆಂದರೆ ವಿಶೇಷ ಶಕ್ತಿ ಸಂಚಲನವಾಗುತ್ತಿತ್ತು” ಎಂದು ನಟ ಮಣಿಯನ್ ಪಿಳ್ಳೈ ರಾಜು ಹೇಳಿದ್ದಾರೆ.

 ಇದನ್ನೂ ಓದಿರಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...