Homeಮುಖಪುಟನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಾರು ಅಪಘಾತದಲ್ಲಿ ನಾನು ಸುರಕ್ಷಿತವಾಗಿದ್ದೇನೆ, ನನ್ನ ಪತಿ ನಂಬಿರುವ ಮುರುಗನ್ ದೇವರು ನಮ್ಮನ್ನು ಉಳಿಸಿದ್ದಾರೆ ಎಂದು ನಟಿ ಖುಷ್ಬೂ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇತ್ತಿಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ತಮಿಳುನಾಡು ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬಿಜೆಪಿಯ ವೆಟ್ರಿವೆಲ್ ಯಾತ್ರೆಯಲ್ಲಿ ಭಾಗವಹಿಸಲು ನಟಿ ಕಡಲೂರಿನ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬುಧವಾರ ಬೆಳಿಗ್ಗೆ ಮೇಲ್‌ಮರವತ್ತೂರ್ ಸಮೀಪ ಅಪಘಾತ ಸಂಭವಿಸಿದೆ.

ಟ್ಯಾಂಕರ್‌ ಒಂದು ತಾನು ಪ್ರಯಾಣಿಸುತ್ತಿದ್ದ ಕಾರಿಗೆ ಗುದ್ದಿದೆ ಎಂದು ಹಾನಿಗೊಳಗಾದ ತನ್ನ ಕಾರಿನ ಚಿತ್ರಗಳನ್ನು ಖುಷ್ಬೂ ಟ್ವೀಟ್ ಮಾಡಿದ್ದು, ತಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಖುಷ್ಬೂ ಕಡಲೂರು ಕಡೆಗೆ ಪ್ರಯಾಣ ಮುಂದುವರಿಸಿದ್ದಾರೆ.

 

ಖುಷ್ಬೂ ತನ್ನ ಟ್ವಿಟ್ಟರ್ ಖಾತೆಯಲ್ಲಿ ಭಾರಿ ಹಾನಿಗೊಳಗಾದ ತಮ್ಮ ಕಾರಿನ ಚಿತ್ರಗಳನ್ನು ಹಂಚಿಕೊಂಡು,  “ಮೇಲ್‌ಮರವತ್ತೂರ್ ಬಳಿ ಕಾರು ಅಪಘಾತ ಸಂಭವಿಸಿದೆ..ಒಂದು ಟ್ಯಾಂಕರ್ ಒಂದು ನಮ್ಮ ಕಾರಿಗೆ ಗುದ್ದಿದೆ. ನಿಮ್ಮ ಆಶೀರ್ವಾದ ಮತ್ತು ದೇವರ ಅನುಗ್ರಹದಿಂದ ನಾನು ಸುರಕ್ಷಿತ. ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರಿನ ಕಡೆಗೆ ನನ್ನ ಪ್ರಯಾಣವನ್ನು ಮುಂದುವರಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಸೇರಿಸಿದ ಖುಷ್ಬೂ ಅವರು ದೇವರ ಮೇಲಿನ ನಂಬಿಕೆಯ ಬಗ್ಗೆಯೂ ಬರೆದಿದ್ದಾರೆ. “ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ಮುರುಗನ್ ದೇವರು ನಮ್ಮನ್ನು ಉಳಿಸಿದ್ದಾರೆ” ಎಂದು ಹೇಳಿದ್ದಾರೆ.

Image
PC: Twitter@KhushbuSundar

ಬಿಜೆಪಿಯ ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಕೂಡ “ಅಪಘಾತ ನಡೆದ ಬಗ್ಗೆ ನನಗೆ ಆಘಾತವಾಗಿದೆ. ಮುರುಗನ್ ದೇವರ ಕೃಪೆಯಿಂದ ನೀವು ಸುರಕ್ಷಿತರಾಗಿದ್ದೀರಿ ಎಂದು ನನಗೆ ಸಮಾಧಾನವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ ನಡೆಯಲಿದೆ. ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ. ಈ ಮೆರವಣಿಗೆಯಲ್ಲಿ ಪಕ್ಷದ ಸದಸ್ಯರು ರಾಜ್ಯಾದ್ಯಂತ ಮುರುಗನ್ ದೇವಾಲಯಗಳಿಗೆ ಭೇಟಿ ನೀಡಲು ಯೋಜಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಯಾತ್ರೆಗೆ ಅನುಮತಿ ನೀಡಿಲ್ಲ.


ಇದನ್ನೂ ಓದಿ: ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...