Homeಮುಖಪುಟನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಾರು ಅಪಘಾತದಲ್ಲಿ ನಾನು ಸುರಕ್ಷಿತವಾಗಿದ್ದೇನೆ, ನನ್ನ ಪತಿ ನಂಬಿರುವ ಮುರುಗನ್ ದೇವರು ನಮ್ಮನ್ನು ಉಳಿಸಿದ್ದಾರೆ ಎಂದು ನಟಿ ಖುಷ್ಬೂ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇತ್ತಿಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ತಮಿಳುನಾಡು ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬಿಜೆಪಿಯ ವೆಟ್ರಿವೆಲ್ ಯಾತ್ರೆಯಲ್ಲಿ ಭಾಗವಹಿಸಲು ನಟಿ ಕಡಲೂರಿನ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬುಧವಾರ ಬೆಳಿಗ್ಗೆ ಮೇಲ್‌ಮರವತ್ತೂರ್ ಸಮೀಪ ಅಪಘಾತ ಸಂಭವಿಸಿದೆ.

ಟ್ಯಾಂಕರ್‌ ಒಂದು ತಾನು ಪ್ರಯಾಣಿಸುತ್ತಿದ್ದ ಕಾರಿಗೆ ಗುದ್ದಿದೆ ಎಂದು ಹಾನಿಗೊಳಗಾದ ತನ್ನ ಕಾರಿನ ಚಿತ್ರಗಳನ್ನು ಖುಷ್ಬೂ ಟ್ವೀಟ್ ಮಾಡಿದ್ದು, ತಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಖುಷ್ಬೂ ಕಡಲೂರು ಕಡೆಗೆ ಪ್ರಯಾಣ ಮುಂದುವರಿಸಿದ್ದಾರೆ.

 

ಖುಷ್ಬೂ ತನ್ನ ಟ್ವಿಟ್ಟರ್ ಖಾತೆಯಲ್ಲಿ ಭಾರಿ ಹಾನಿಗೊಳಗಾದ ತಮ್ಮ ಕಾರಿನ ಚಿತ್ರಗಳನ್ನು ಹಂಚಿಕೊಂಡು,  “ಮೇಲ್‌ಮರವತ್ತೂರ್ ಬಳಿ ಕಾರು ಅಪಘಾತ ಸಂಭವಿಸಿದೆ..ಒಂದು ಟ್ಯಾಂಕರ್ ಒಂದು ನಮ್ಮ ಕಾರಿಗೆ ಗುದ್ದಿದೆ. ನಿಮ್ಮ ಆಶೀರ್ವಾದ ಮತ್ತು ದೇವರ ಅನುಗ್ರಹದಿಂದ ನಾನು ಸುರಕ್ಷಿತ. ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರಿನ ಕಡೆಗೆ ನನ್ನ ಪ್ರಯಾಣವನ್ನು ಮುಂದುವರಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಸೇರಿಸಿದ ಖುಷ್ಬೂ ಅವರು ದೇವರ ಮೇಲಿನ ನಂಬಿಕೆಯ ಬಗ್ಗೆಯೂ ಬರೆದಿದ್ದಾರೆ. “ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ಮುರುಗನ್ ದೇವರು ನಮ್ಮನ್ನು ಉಳಿಸಿದ್ದಾರೆ” ಎಂದು ಹೇಳಿದ್ದಾರೆ.

Image
PC: Twitter@KhushbuSundar

ಬಿಜೆಪಿಯ ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಕೂಡ “ಅಪಘಾತ ನಡೆದ ಬಗ್ಗೆ ನನಗೆ ಆಘಾತವಾಗಿದೆ. ಮುರುಗನ್ ದೇವರ ಕೃಪೆಯಿಂದ ನೀವು ಸುರಕ್ಷಿತರಾಗಿದ್ದೀರಿ ಎಂದು ನನಗೆ ಸಮಾಧಾನವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ ನಡೆಯಲಿದೆ. ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ. ಈ ಮೆರವಣಿಗೆಯಲ್ಲಿ ಪಕ್ಷದ ಸದಸ್ಯರು ರಾಜ್ಯಾದ್ಯಂತ ಮುರುಗನ್ ದೇವಾಲಯಗಳಿಗೆ ಭೇಟಿ ನೀಡಲು ಯೋಜಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಯಾತ್ರೆಗೆ ಅನುಮತಿ ನೀಡಿಲ್ಲ.


ಇದನ್ನೂ ಓದಿ: ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...