Homeಮುಖಪುಟಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ-ಜನಸೇನಾ ಪಕ್ಷಗಳ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ-ಜನಸೇನಾ ಪಕ್ಷಗಳ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್

- Advertisement -
- Advertisement -

ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರು ತಮ್ಮ ಜನಸೇನಾ ಪಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

371 ಕೋಟಿ ರೂ. ಹಗರಣದ ಆರೋಪದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ ನಂತರ ಅವರನ್ನು ಎರಡು ವಾರಗಳ ಕಾಲ ರಾಜಮಂಡ್ರಿ ಜೈಲಿಗೆ ಕಳುಹಿಸಲಾಗಿದೆ.

ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಟಿಡಿಪಿ ಮುಖ ಸ್ಮಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪವನ್ ಕಲ್ಯಾಣ್, ”ಚುನಾವಣೆಯಲ್ಲಿ ಮೈಎಸ್‌ಆರ್‌ಸಿಪಿ ಎದುರು ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಲಿವ ಎಂದು ಜನಸೇನಾ ಮುಖ್ಯಸ್ಯ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

”ವೈಆಸ್‌ಆರ್‌ಸಿಪಿ ದುರಾಡಳಿತವನ್ನು ಸಹಿಸಲು ಸಾಧ್ಯವಿಲ್ಲ, ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಾಗುವುದು” ಎಂದರು.

ಈ ವೇಳೆ ನಾಯ್ಡು ಅವರ ಪುತ್ರ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಹಿಂದೂಪುರ ಶಾಸಕ ಮತ್ತು ನಾಯ್ಕು ಅವರ ಭಾವ ನಂದಮೂರಿ ಬಾಲಕೃಷ್ಣ ಅವರು ಇದ್ದರು.

”ಮುಂಬರುವ ಚುನಾವಣೆಯಲ್ಲಿ ಜನಸೇನೆ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ನಾನು ಇಂದು ನಿರ್ಧಾರ ತೆಗೆದುಕೊಂಡಿದ್ದೇನೆ. ಇದು ನಮ್ಮ (ಅವರ ಪಕ್ಷದ) ರಾಜಕೀಯ ಭವಿಷ್ಯದ ಬಗ್ಗೆ ಅಲ್ಲ… ಬದಲಿಗೆ ಆಂಧ್ರಪ್ರದೇಶದ ಭವಿಷ್ಯದ ವಿಚಾರವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ” ಎಂದು ಪವಣ್ ಕಲ್ಯಾಣ್ ಹೇಳಿದರು.

ಭಾನುವಾರ ಚಂದ್ರಬಾಬು ನಾಯ್ಡು ಅವರನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಭದ್ರತಾ ಕಾಳಜಿಯನ್ನು ಉಲ್ಲೇಖಿಸಿದ ನಂತರ ಅವರ ಪತ್ನಿಯ ಗೃಹ ಬಂಧನದ ಮನವಿಯನ್ನು ತಿರಸ್ಕರಿಸಿತು.

ನಾಯ್ಡು ಈ ಪ್ರಕರಣದಲ್ಲಿ ಪ್ರಾಥಮಿಕ ಆರೋಪಿಯಾಗಿದ್ದಾರೆ.  ಅವರನ್ನು ಆರೋಪಿ ಸಂಖ್ಯೆ 37 ಎಂದು ಅಪರಾಧ ತನಿಖಾ ಇಲಾಖೆಯು ಪಟ್ಟಿ ಮಾಡಿತ್ತು.

ಈ ಪ್ರಕರಣದಲ್ಲಿ ರಾಜ್ಯಕ್ಕೆ ₹ 300 ಕೋಟಿಗೂ ಹೆಚ್ಚು ನಷ್ಟವನ್ನು ಉಂಟುಮಾಡಿದೆ ಎಂದು ಆರೋಪಿಸಲಾಗಿದೆ. ಖಾಸಗಿ ಸಂಸ್ಥೆಗಳಿಂದ ಯಾವುದೇ ಖರ್ಚು ಮಾಡುವ ಮೊದಲು, ಆಗಿನ ಸರ್ಕಾರವು ₹ 371 ಕೋಟಿಗಳನ್ನು ಮುಂಗಡವಾಗಿ ಒದಗಿಸಿದೆ ಎಂದು ಸಿಐಡಿ ಹೇಳಿದೆ.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...