Homeಮುಖಪುಟಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ-ಜನಸೇನಾ ಪಕ್ಷಗಳ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ-ಜನಸೇನಾ ಪಕ್ಷಗಳ ಮೈತ್ರಿ ಘೋಷಿಸಿದ ಪವನ್ ಕಲ್ಯಾಣ್

- Advertisement -
- Advertisement -

ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರು ತಮ್ಮ ಜನಸೇನಾ ಪಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

371 ಕೋಟಿ ರೂ. ಹಗರಣದ ಆರೋಪದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ ನಂತರ ಅವರನ್ನು ಎರಡು ವಾರಗಳ ಕಾಲ ರಾಜಮಂಡ್ರಿ ಜೈಲಿಗೆ ಕಳುಹಿಸಲಾಗಿದೆ.

ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಟಿಡಿಪಿ ಮುಖ ಸ್ಮಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪವನ್ ಕಲ್ಯಾಣ್, ”ಚುನಾವಣೆಯಲ್ಲಿ ಮೈಎಸ್‌ಆರ್‌ಸಿಪಿ ಎದುರು ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಲಿವ ಎಂದು ಜನಸೇನಾ ಮುಖ್ಯಸ್ಯ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

”ವೈಆಸ್‌ಆರ್‌ಸಿಪಿ ದುರಾಡಳಿತವನ್ನು ಸಹಿಸಲು ಸಾಧ್ಯವಿಲ್ಲ, ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಾಗುವುದು” ಎಂದರು.

ಈ ವೇಳೆ ನಾಯ್ಡು ಅವರ ಪುತ್ರ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಹಿಂದೂಪುರ ಶಾಸಕ ಮತ್ತು ನಾಯ್ಕು ಅವರ ಭಾವ ನಂದಮೂರಿ ಬಾಲಕೃಷ್ಣ ಅವರು ಇದ್ದರು.

”ಮುಂಬರುವ ಚುನಾವಣೆಯಲ್ಲಿ ಜನಸೇನೆ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ನಾನು ಇಂದು ನಿರ್ಧಾರ ತೆಗೆದುಕೊಂಡಿದ್ದೇನೆ. ಇದು ನಮ್ಮ (ಅವರ ಪಕ್ಷದ) ರಾಜಕೀಯ ಭವಿಷ್ಯದ ಬಗ್ಗೆ ಅಲ್ಲ… ಬದಲಿಗೆ ಆಂಧ್ರಪ್ರದೇಶದ ಭವಿಷ್ಯದ ವಿಚಾರವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ” ಎಂದು ಪವಣ್ ಕಲ್ಯಾಣ್ ಹೇಳಿದರು.

ಭಾನುವಾರ ಚಂದ್ರಬಾಬು ನಾಯ್ಡು ಅವರನ್ನು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಭದ್ರತಾ ಕಾಳಜಿಯನ್ನು ಉಲ್ಲೇಖಿಸಿದ ನಂತರ ಅವರ ಪತ್ನಿಯ ಗೃಹ ಬಂಧನದ ಮನವಿಯನ್ನು ತಿರಸ್ಕರಿಸಿತು.

ನಾಯ್ಡು ಈ ಪ್ರಕರಣದಲ್ಲಿ ಪ್ರಾಥಮಿಕ ಆರೋಪಿಯಾಗಿದ್ದಾರೆ.  ಅವರನ್ನು ಆರೋಪಿ ಸಂಖ್ಯೆ 37 ಎಂದು ಅಪರಾಧ ತನಿಖಾ ಇಲಾಖೆಯು ಪಟ್ಟಿ ಮಾಡಿತ್ತು.

ಈ ಪ್ರಕರಣದಲ್ಲಿ ರಾಜ್ಯಕ್ಕೆ ₹ 300 ಕೋಟಿಗೂ ಹೆಚ್ಚು ನಷ್ಟವನ್ನು ಉಂಟುಮಾಡಿದೆ ಎಂದು ಆರೋಪಿಸಲಾಗಿದೆ. ಖಾಸಗಿ ಸಂಸ್ಥೆಗಳಿಂದ ಯಾವುದೇ ಖರ್ಚು ಮಾಡುವ ಮೊದಲು, ಆಗಿನ ಸರ್ಕಾರವು ₹ 371 ಕೋಟಿಗಳನ್ನು ಮುಂಗಡವಾಗಿ ಒದಗಿಸಿದೆ ಎಂದು ಸಿಐಡಿ ಹೇಳಿದೆ.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...