Homeಮುಖಪುಟ17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

- Advertisement -
- Advertisement -

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿ ನಡೆಯಿತು.

ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ ಎಂದು ತಿಳಿಸಿದರು.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೋಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಚಿತ್ರೋತ್ಸವದ ಚಿತ್ರಗಳ ಪ್ರದರ್ಶನ ನಡೆಯಲಿದೆ. ಈಗಾಗಲೇ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ ಎಂದು ಹೇಳಿದರು.

ಲುಲು ಮಾಲ್ ಜೊತೆಗೆ, ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ ಎಂದು ಸಿಎಂ ಮಾಹಿತಿ ನೀಡಿದರು.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ದೇಶಗಳ 200ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನ

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶಗಳ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ) ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್) ಲೊಕಾರ್ನೂ (ಸ್ವಿಟ್ಜರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ ಎಂದು ಸಿಎಂ ವಿವರಿಸಿದರು.

ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳೂ ಕೂಡ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಪೋಲಿಷ್ ಕಲ್ಚರಲ್ ಸೆಂಟರ್ ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಪೋಲಿಷ್ ಕಲ್ಚರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective) ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ. ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ. ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.

2025-26ನೇರ ಸಾಲಿನ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸಲು 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ,
ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...