Homeಮುಖಪುಟ17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

- Advertisement -
- Advertisement -

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿ ನಡೆಯಿತು.

ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ ಎಂದು ತಿಳಿಸಿದರು.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೋಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಚಿತ್ರೋತ್ಸವದ ಚಿತ್ರಗಳ ಪ್ರದರ್ಶನ ನಡೆಯಲಿದೆ. ಈಗಾಗಲೇ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ ಎಂದು ಹೇಳಿದರು.

ಲುಲು ಮಾಲ್ ಜೊತೆಗೆ, ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ ಎಂದು ಸಿಎಂ ಮಾಹಿತಿ ನೀಡಿದರು.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ದೇಶಗಳ 200ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನ

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶಗಳ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ) ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್) ಲೊಕಾರ್ನೂ (ಸ್ವಿಟ್ಜರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ ಎಂದು ಸಿಎಂ ವಿವರಿಸಿದರು.

ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳೂ ಕೂಡ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಪೋಲಿಷ್ ಕಲ್ಚರಲ್ ಸೆಂಟರ್ ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಪೋಲಿಷ್ ಕಲ್ಚರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective) ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ. ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ. ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.

2025-26ನೇರ ಸಾಲಿನ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸಲು 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ,
ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...