Homeಕರ್ನಾಟಕಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ 'ದಾರಿ ತಪ್ಪಿದ ಮಗ': ನಟ ಪ್ರಕಾಶ್ ರಾಜ್

ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್

- Advertisement -
- Advertisement -

ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ‘ದಾರಿತಪ್ಪಿದ ಮಗ’ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಂಡ್ಯದ ರೈತ ಸಭಾಗಂಣದಲ್ಲಿ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ ಆಯೋಜಿಸಿದ್ದ ‘ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶ’ ದಲ್ಲಿ ಮಾತನಾಡಿದ ಅವರು, “ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳ ಮಟ್ಟಕ್ಕೆ ಇಳಿದು ಮಾತನಾಡಲು ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ”? ಎಂದು ಪ್ರಶ್ನಿಸಿದರು.

“ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ‘ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು’ ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು” ಎಂದು ಕರೆ ನೀಡಿದರು.

“ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ? ಬರಗಾಲದಲ್ಲಿ ಯಾಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.

“ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಏಪ್ರಿಲ್ ಬಂದರೂ ಬರ ಪರಿಹಾರ ನೀಡಿಲ್ಲ. ಪರಿಹಾರ ಬಿಡುಗಡೆಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರಕ್ಕೆ ನೋಟಿಸ್ ನೀಡಲು ಮುಂದಾದಾಗ, ನೋಟಿಸ್ ಕೊಡ್ಬೇಡಿ ಮಾನ ಮರ್ಯಾದೆ ಹೋಗುತ್ತೆ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ನಾಟಕ ಯಾಕೆ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಪ್ರಗತಿಪರ ಚಿಂತಕ ಡಾ.ವಾಸು ಹಾಗೂ ಭೂಮಿ ಮತ್ತು ವಸತಿ ಹಕ್ಕುಗಳ ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ವಿಚಾರ ಮಂಡನೆ ಮಾಡಿದರು. ಸಿರಿಮನೆ ನಾಗರಾಜು, ಪ್ರಗತಿಪರ ವಕೀಲ ಬಿ.ಟಿ.ವಿಶ್ವನಾಥ್ ಅಧ್ಯಕತೆ ವಹಿಸಿದ್ದರು. ಕರ್ನಾಟಕ ಜನಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಕೃಷ್ಣ ಪ್ರಕಾಶ್, ಸಿಐಟಿಯು ಮುಖಂಡರಾದ ಸಿ.ಕುಮಾರಿ, ಪತ್ರಕರ್ತ ಎನ್.ನಾಗೇಶ್, ರೈತಸಂಘದ ಲತಾ ಶಂಕರ್, ಕರ್ನಾಟಕ ಜನಶಕ್ತಿಯ ಸಿದ್ದರಾಜು, ಪೂರ್ಣಿಮಾ, ಜಗದೀಶ್ ನಗರಕರೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಯ ₹5,300 ಕೋಟಿ ಎಲ್ಲಿ? ಪ್ರಧಾನಿ ಮೋದಿಗೆ ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...