Homeಮುಖಪುಟ100 ಕೋಟಿ ರೂ. ವಂಚನೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

100 ಕೋಟಿ ರೂ. ವಂಚನೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

- Advertisement -
- Advertisement -

ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್‌ನ ವಿರುದ್ಧ 100 ಕೋಟಿ ರೂ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಈ ತನಿಖೆಯು ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲರ್ಸ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದೆ. ಆ ಸಂಸ್ಥೆಯ ಮೇಲೆ ನವೆಂಬರ್ 20 ರಂದು ಇಡಿ ದಾಳಿ ನಡೆಸಿ, ರೂ. 23.70 ಲಕ್ಷ ಹಾಗೂ ಚಿನ್ನಾಭರಣವನ್ನು ವಶ ಪಡಿಸಿಕೊಂಡಿತ್ತು. ಪ್ರಕಾಶ್ ರಾಜ್ ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮುಂದಿನ ವಾರ ಚೆನ್ನೈನಲ್ಲಿರುವ ಇಡಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಹೂಡಿಕೆದಾರರಿಗೆ 100 ವಂಚಿಸಿರುವ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಸೇರಿದಂತೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹಲವು ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿರುವ ತಿರುಚ್ಚಿ ಮೂಲದ ಆಭರಣ ಸಂಸ್ಥೆಯ ಶಾಖೆಗಳ ಮೇಲೆ ಇಡಿ ದಾಳಿ ನಡೆಸಿತ್ತು.

ಪ್ರಣವ್ ಜ್ಯುವೆಲ್ಲರ್ಸ್ ನಡೆಸುತ್ತಿದ್ದ ಮಳಿಗೆಗಳು ಅಕ್ಟೋಬರ್‌ನಲ್ಲಿ ಮುಚ್ಚಲ್ಪಟ್ಟವು ಮತ್ತು ದೂರುಗಳ ಆಧಾರದ ಮೇಲೆ ತಮಿಳುನಾಡಿನ ತಿರುಚ್ಚಿಯ ಆರ್ಥಿಕ ಅಪರಾಧಗಳ ವಿಭಾಗವು ಮಾಲೀಕ ಮದನ್ ವಿರುದ್ಧ ಪ್ರಕರಣ ದಾಖಲಿಸಿದೆ. ಈ ತಿಂಗಳ ಆರಂಭದಲ್ಲಿ ಮಾಲೀಕರು ಮತ್ತು ಅವರ ಪತ್ನಿ ವಿರುದ್ಧ ಲುಕ್‌ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಪ್ರಣವ್ ಜ್ಯುವೆಲ್ಲರ್ಸ್‌ನಿಂದ ₹ 100 ಕೋಟಿ ಸಂಗ್ರಹಿಸಲಾಗಿದೆ ಎಂದು ಇಡಿ ನಿನ್ನೆ ಹೇಳಿಕೆಯಲ್ಲಿ ತಿಳಿಸಿದೆ . ಹೂಡಿಕೆ ಮಾಡಿದ ಮೊತ್ತವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗಿಲ್ಲ. ಸಂಸ್ಥೆ (ಪ್ರಣವ್ ಜ್ಯುವೆಲರ್ಸ್) ಮತ್ತು ಇತರ ಸಂಪರ್ಕಿತ ವ್ಯಕ್ತಿಗಳು ಸಾರ್ವಜನಿಕ ಹಣವನ್ನು ಶೆಲ್ ಘಟಕಗಳು/ಪ್ರವೇಶ ಪೂರೈಕೆದಾರರಿಗೆ, ಚಿನ್ನಾಭರಣ/ಚಿನ್ನದ ಆಭರಣಗಳ ಖರೀದಿಯ ನೆಪದಲ್ಲಿ ಸಾರ್ವಜನಿಕರನ್ನು ವಂಚಿಸಿದೆ ಎಂದು ಇಡಿ ಹೇಳಿದೆ.

ಪ್ರಕಾಶ್ ರಾಜ್ ಅವರು ಹಿಂದಿ ಮತ್ತು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದಾರೆ. ಇವರು ಬಿಜೆಪಿಯ ತೀವ್ರ ಟೀಕಾಕಾರಲ್ಲ ಒಬ್ಬರಾಗಿದ್ದಾರೆ. ತಮಿಳುನಾಡು ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಎಫ್‌ಐಆರ್‌ನಿಂದ ಇಡಿ ಪ್ರಕರಣ ದಾಖಲಿಸಿದೆ.

ಪ್ರಣವ್ ಜ್ಯುವೆಲರ್ಸ್ ಮತ್ತು ಇತರರು ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಸಾರ್ವಜನಿಕರಿಂದ 100 ಕೋಟಿ ರೂ. ಗಳನ್ನು ಹೆಚ್ಚಿನ ಆದಾಯದ ಭರವಸೆಯೊಂದಿಗೆ ಸಂಗ್ರಹಿಸಿದ್ದಾರೆ ಎಂದು ಫೆಡರಲ್ ಏಜೆನ್ಸಿ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...