Homeಕರ್ನಾಟಕನಟ ಪ್ರಕಾಶ್ ರಾಜ್‌ಗೆ ಸಂಘಪರಿವಾರದ ಕಾರ್ಯಕರ್ತನಿಂದ ಕೊಲೆ ಬೆದರಿಕೆ

ನಟ ಪ್ರಕಾಶ್ ರಾಜ್‌ಗೆ ಸಂಘಪರಿವಾರದ ಕಾರ್ಯಕರ್ತನಿಂದ ಕೊಲೆ ಬೆದರಿಕೆ

- Advertisement -
- Advertisement -

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಲೈವ್‌ನಲ್ಲಿ ಜೀವ ಬೆದರಿಕೆ ಹಾಕಿರುವ ವೀಡಿಯೊ ವೈರಲ್ ಆಗಿದೆ. ಈ ವಿಚಾರವನ್ನು ಪ್ರಕಾಶ ರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಸೌಜನ್ಯ ಅತ್ಯಾಚಾರ, ಕೊಲೆ ಕೊಲೆ ಪ್ರಕರಣದ ಬಗ್ಗೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ್‌ ರಾಜ್‌ ಅವರು, ”ʼಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನೆ ಮಾಡಿದ್ದರು.

ಪ್ರಕಾಶ್ ರಾಜ್ ಅವರು ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಸಂಘಪರಿವಾರದ ಕಾರ್ಯಕರ್ತ ಸಂತೋಷ್‌ ಕಾರ್ತಾಳ್‌ ೆನ್ನುವವನು, ಫೇಸ್‌ಬುಕ್‌ನಲ್ಲಿ ಲೈವ್ ಬಂದು, ”ಧರ್ಮಾಧಿಕಾರಿಗಳ ಕ್ಷಮೆ ಕೇಳದಿದ್ದರೆ 24 ಗಂಟೆಯೊಳಗಡೆ ನಿನ್ನ ಮನೆ ಮುಂದೆ ನಿನ್ನ ಹೆಣ ಬಿದ್ದಿರುತ್ತದೆ” ಎಂದು ಕೊಲೆ ಬೆದರಿಕೆ ಹಾಕಿದ್ದಾನೆ. ಈ ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವಿಚಾರವನ್ನು ಪ್ರಕಾಶ್‌ ರಾಜ್‌ ಅವರು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ”ನೊಡ್ರಪಾ.. ಉತ್ತರ ಕುಮಾರರು .. ಕೊಲೆ ಬೆದರಿಕೆ ಹಾಕ್ತಾ ಇದ್ದಾರೆ .. ಏನ್ ಮಾಡಾಣ ವಸಿ ಯೋಳಿ” ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌, ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯ ಕೆಎಲ್ ಅಶೋಕ್ ಅವರು, ”ನಟ ಪ್ರಕಾಶ್ ರಾಜ್ ಅವರು ಅವಾಚ್ಯ ಪದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಈ ಸಂಘಪರಿವಾರದ ಕಾರ್ಯಕರ್ತನನ್ನು ಬಂಧಿಸಬೇಕು. ಈ ರೀತಿ ಕಾನೂನನ್ನು ಕೈಗೆತ್ತಿಕೊಳ್ಳುತ್ತೇವೆ ಎನ್ನುವ ದಾರ್ಷ್ಟ್ಯತನದಿಂದ ಮಾತನಾಡುವವರ ಮೇಲೆ ಪೊಲೀಸ್ ಇಲಾಖೆ ಕಣ್ಗಾವಲು ಇಡಬೇಕು ಮತ್ತು ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

”ಸೆಪ್ಟಂಬರ್ 5ರಂದು ಪತ್ರಕರ್ತೆ, ವಿಚಾರವಾದಿ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಲಾದ ದಿನ, ಈ ರೀತಿ ಸಮಾಜದ ಅಂಕುಡೊಂಕುಗಳನ್ನು ಎತ್ತಿತೋರಿಸುತ್ತ, ಸಮಾಜದಲ್ಲಿ ಸಮಾನತೆ ಬರಬೇಕು ಎಂದು ಹೋರಾಡುವವರನ್ನ, ಸಂವಿಧಾನದ ಪರವಾಗಿ ಮಾತನಾಡುವ ಧ್ವನಿಗಳನ್ನು ಅಡಗಿಸುವ ಸಂಘಪರಿವಾರದ ಈ ಷಡ್ಯಂತ್ರ ನಿಲ್ಲಬೇಕು. ಈ ಬಗ್ಗೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೆಎಲ್ ಅಶೋಕ್ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ಧರ್ಮಾಧಿಕಾರಿಯ ಮಂಪರು ಪರೀಕ್ಷೆಗೆ ಮಾಡೋದ್ರಲ್ಲಿ ತಪ್ಪೇನಿದೆ?; ಪ್ರಕಾಶ್ ರಾಜ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...