Homeಮುಖಪುಟಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

ಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

- Advertisement -
- Advertisement -

ಶುಕ್ರವಾರ ಹೃದಯಘಾತದಿಂದ ನಿಧನರಾದ ಮೇರು ನಟ, ಕನ್ನಡಿಗರ ಕಣ್ಮಣಿ ಪುನೀತ್‌ ರಾಜ್‌ಕುಮಾರ್‌ ಭೂಮಿ ತಾಯಿಯ ಗರ್ಭ ಸೇರಿದರು. ಕನ್ನಡಿಗರ ಹೃದಯವಾಸಿ ಭೂಮಿ ತಾಯಿಯನ್ನು ಅಪ್ಪಿದರು.

ಕಂಠೀರವ ಸ್ಟುಡಿಯೊದಲ್ಲಿ ಅವರ ಅಂತ್ಯಕ್ರಿಯೆ ನೆರವೇರುತ್ತಿದೆ. ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ಕುಮಾರ್‌ ಅವರ ಸಮಾಧಿ ಕಂಠೀರವ ಸ್ಟುಡಿಯೊದಲ್ಲೇ ಇದ್ದು, ತಂದೆ- ತಾಯಿಯೊಂದಿಗೆ ಪುನೀತ್‌ ರಾಜ್‌ಕುಮಾರ್‌ ಚಿರನಿದ್ರೆಗೆ ಜಾರಿದರು.

PC: Prajavani

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇರಿಸಲಾಗಿತ್ತು. ಪ್ರೀತಿಯ ಅಪ್ಪುವನ್ನು ನೋಡಲು ರಾಜ್ಯ ಹಾಗೂ ದೇಶದ ಮೂಲೆಮೂಲೆಗಳಿಂದ ಜನಸಾಗರವೇ ಹರಿದುಬಂದಿತ್ತು.

ಭಾನುವಾರ ಮುಂಜಾನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಕೈಗೊಳ್ಳಲಾಯಿತು. ಚಿತ್ರರಂಗದ ತಾರೆಯರು ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನ ಪಡೆದರು.

ಪುನೀತ್‌ ಅವರ ಇಬ್ಬರು ಪುತ್ರಿಯರು ತಮ್ಮ ತಾಯಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರನ್ನು ಅಪ್ಪಿ ಶೋಕತಪ್ತರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್‌ ಅವರ ಪಾರ್ಥೀವ ಶರೀರಕ್ಕೆ ಮುತ್ತಿಟ್ಟು ಭಾವುಕರಾದರು.

ಪೊಲೀಸ್‌ ಬ್ಯಾಂಡ್‌ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಮೂರು ಸುತ್ತು ಗುಂಡು ಸಿಡಿಸಿ ಗೌರವ ಸಲ್ಲಿಸಲಾಯಿತು. ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ಈಡಿಗ ಸಮುದಾಯದ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಕೈಗೊಳ್ಳಲಾಯಿದೆ. ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ವಿನಯ್‌ ಅವರು ವಿಧಿವಿಧಾನವನ್ನು ಪೂರೈಸುತ್ತಿದ್ದಾರೆ.

ಪುನೀತ್‌ ಅವರ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿ ದೃತಿ, ವಂದಿತಾ ಅವರಿಗೆ ಹಸ್ತಾಂತರಿಸಿದರು.

ಅಡ್ಡಪಲ್ಲಕ್ಕಿಯಲ್ಲಿ ತರಲಾಗಿದ್ದ ಪಾರ್ಥೀವ ಶರೀರವನ್ನು ಪ್ರದಕ್ಷಿಣೆ ಹಾಕಲಾಯಿತು. ಕಂಠೀರವ ಸ್ಟುಡಿಯೊದಲ್ಲಿ ಅತೀವ ದುಃಖ ಮಡುಗಟ್ಟಿತ್ತು. ಡಾ.ರಾಜ್‌ಕುಮಾರ್‌ ಕುಟುಂಬದ ಎಲ್ಲರೂ ಅಂತಿಮ ನಮನ ಸಲ್ಲಿಸಿದರು. ಪ್ರೀತಿಯ ಸಹೋದರನನ್ನು ನೋಡುತ್ತ ಡಾ.ಶಿವರಾಜ್‌ಕುಮಾರ್‌ ಬಿಕ್ಕಿ ಬಿಕ್ಕಿ ಅತ್ತರು.

ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅವರ ಪತ್ನಿ ಮಂಗಳಾ, ಮಗ ಯುವ ರಾಜ್‌ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ನಟರಾದ ಉಪೇಂದ್ರ, ರವಿಚಂದ್ರನ್, ಯಶ್, ಜಗ್ಗೇಶ್, ಡಾಲಿ ಧನಂಜಯ, ದುನಿಯಾ ವಿಜಯ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಆರಗ ಜ್ಞಾನೇಂದ್ರ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.


ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...