Homeಮುಖಪುಟಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

ಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

- Advertisement -
- Advertisement -

ಶುಕ್ರವಾರ ಹೃದಯಘಾತದಿಂದ ನಿಧನರಾದ ಮೇರು ನಟ, ಕನ್ನಡಿಗರ ಕಣ್ಮಣಿ ಪುನೀತ್‌ ರಾಜ್‌ಕುಮಾರ್‌ ಭೂಮಿ ತಾಯಿಯ ಗರ್ಭ ಸೇರಿದರು. ಕನ್ನಡಿಗರ ಹೃದಯವಾಸಿ ಭೂಮಿ ತಾಯಿಯನ್ನು ಅಪ್ಪಿದರು.

ಕಂಠೀರವ ಸ್ಟುಡಿಯೊದಲ್ಲಿ ಅವರ ಅಂತ್ಯಕ್ರಿಯೆ ನೆರವೇರುತ್ತಿದೆ. ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ಕುಮಾರ್‌ ಅವರ ಸಮಾಧಿ ಕಂಠೀರವ ಸ್ಟುಡಿಯೊದಲ್ಲೇ ಇದ್ದು, ತಂದೆ- ತಾಯಿಯೊಂದಿಗೆ ಪುನೀತ್‌ ರಾಜ್‌ಕುಮಾರ್‌ ಚಿರನಿದ್ರೆಗೆ ಜಾರಿದರು.

PC: Prajavani

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇರಿಸಲಾಗಿತ್ತು. ಪ್ರೀತಿಯ ಅಪ್ಪುವನ್ನು ನೋಡಲು ರಾಜ್ಯ ಹಾಗೂ ದೇಶದ ಮೂಲೆಮೂಲೆಗಳಿಂದ ಜನಸಾಗರವೇ ಹರಿದುಬಂದಿತ್ತು.

ಭಾನುವಾರ ಮುಂಜಾನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಕೈಗೊಳ್ಳಲಾಯಿತು. ಚಿತ್ರರಂಗದ ತಾರೆಯರು ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನ ಪಡೆದರು.

ಪುನೀತ್‌ ಅವರ ಇಬ್ಬರು ಪುತ್ರಿಯರು ತಮ್ಮ ತಾಯಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರನ್ನು ಅಪ್ಪಿ ಶೋಕತಪ್ತರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್‌ ಅವರ ಪಾರ್ಥೀವ ಶರೀರಕ್ಕೆ ಮುತ್ತಿಟ್ಟು ಭಾವುಕರಾದರು.

ಪೊಲೀಸ್‌ ಬ್ಯಾಂಡ್‌ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಮೂರು ಸುತ್ತು ಗುಂಡು ಸಿಡಿಸಿ ಗೌರವ ಸಲ್ಲಿಸಲಾಯಿತು. ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ಈಡಿಗ ಸಮುದಾಯದ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಕೈಗೊಳ್ಳಲಾಯಿದೆ. ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ವಿನಯ್‌ ಅವರು ವಿಧಿವಿಧಾನವನ್ನು ಪೂರೈಸುತ್ತಿದ್ದಾರೆ.

ಪುನೀತ್‌ ಅವರ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿ ದೃತಿ, ವಂದಿತಾ ಅವರಿಗೆ ಹಸ್ತಾಂತರಿಸಿದರು.

ಅಡ್ಡಪಲ್ಲಕ್ಕಿಯಲ್ಲಿ ತರಲಾಗಿದ್ದ ಪಾರ್ಥೀವ ಶರೀರವನ್ನು ಪ್ರದಕ್ಷಿಣೆ ಹಾಕಲಾಯಿತು. ಕಂಠೀರವ ಸ್ಟುಡಿಯೊದಲ್ಲಿ ಅತೀವ ದುಃಖ ಮಡುಗಟ್ಟಿತ್ತು. ಡಾ.ರಾಜ್‌ಕುಮಾರ್‌ ಕುಟುಂಬದ ಎಲ್ಲರೂ ಅಂತಿಮ ನಮನ ಸಲ್ಲಿಸಿದರು. ಪ್ರೀತಿಯ ಸಹೋದರನನ್ನು ನೋಡುತ್ತ ಡಾ.ಶಿವರಾಜ್‌ಕುಮಾರ್‌ ಬಿಕ್ಕಿ ಬಿಕ್ಕಿ ಅತ್ತರು.

ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅವರ ಪತ್ನಿ ಮಂಗಳಾ, ಮಗ ಯುವ ರಾಜ್‌ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ನಟರಾದ ಉಪೇಂದ್ರ, ರವಿಚಂದ್ರನ್, ಯಶ್, ಜಗ್ಗೇಶ್, ಡಾಲಿ ಧನಂಜಯ, ದುನಿಯಾ ವಿಜಯ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಆರಗ ಜ್ಞಾನೇಂದ್ರ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.


ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...