Homeಮುಖಪುಟಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

ಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

- Advertisement -
- Advertisement -

ಶುಕ್ರವಾರ ಹೃದಯಘಾತದಿಂದ ನಿಧನರಾದ ಮೇರು ನಟ, ಕನ್ನಡಿಗರ ಕಣ್ಮಣಿ ಪುನೀತ್‌ ರಾಜ್‌ಕುಮಾರ್‌ ಭೂಮಿ ತಾಯಿಯ ಗರ್ಭ ಸೇರಿದರು. ಕನ್ನಡಿಗರ ಹೃದಯವಾಸಿ ಭೂಮಿ ತಾಯಿಯನ್ನು ಅಪ್ಪಿದರು.

ಕಂಠೀರವ ಸ್ಟುಡಿಯೊದಲ್ಲಿ ಅವರ ಅಂತ್ಯಕ್ರಿಯೆ ನೆರವೇರುತ್ತಿದೆ. ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ಕುಮಾರ್‌ ಅವರ ಸಮಾಧಿ ಕಂಠೀರವ ಸ್ಟುಡಿಯೊದಲ್ಲೇ ಇದ್ದು, ತಂದೆ- ತಾಯಿಯೊಂದಿಗೆ ಪುನೀತ್‌ ರಾಜ್‌ಕುಮಾರ್‌ ಚಿರನಿದ್ರೆಗೆ ಜಾರಿದರು.

PC: Prajavani

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇರಿಸಲಾಗಿತ್ತು. ಪ್ರೀತಿಯ ಅಪ್ಪುವನ್ನು ನೋಡಲು ರಾಜ್ಯ ಹಾಗೂ ದೇಶದ ಮೂಲೆಮೂಲೆಗಳಿಂದ ಜನಸಾಗರವೇ ಹರಿದುಬಂದಿತ್ತು.

ಭಾನುವಾರ ಮುಂಜಾನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಕೈಗೊಳ್ಳಲಾಯಿತು. ಚಿತ್ರರಂಗದ ತಾರೆಯರು ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನ ಪಡೆದರು.

ಪುನೀತ್‌ ಅವರ ಇಬ್ಬರು ಪುತ್ರಿಯರು ತಮ್ಮ ತಾಯಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರನ್ನು ಅಪ್ಪಿ ಶೋಕತಪ್ತರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್‌ ಅವರ ಪಾರ್ಥೀವ ಶರೀರಕ್ಕೆ ಮುತ್ತಿಟ್ಟು ಭಾವುಕರಾದರು.

ಪೊಲೀಸ್‌ ಬ್ಯಾಂಡ್‌ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಮೂರು ಸುತ್ತು ಗುಂಡು ಸಿಡಿಸಿ ಗೌರವ ಸಲ್ಲಿಸಲಾಯಿತು. ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ಈಡಿಗ ಸಮುದಾಯದ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಕೈಗೊಳ್ಳಲಾಯಿದೆ. ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ವಿನಯ್‌ ಅವರು ವಿಧಿವಿಧಾನವನ್ನು ಪೂರೈಸುತ್ತಿದ್ದಾರೆ.

ಪುನೀತ್‌ ಅವರ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿ ದೃತಿ, ವಂದಿತಾ ಅವರಿಗೆ ಹಸ್ತಾಂತರಿಸಿದರು.

ಅಡ್ಡಪಲ್ಲಕ್ಕಿಯಲ್ಲಿ ತರಲಾಗಿದ್ದ ಪಾರ್ಥೀವ ಶರೀರವನ್ನು ಪ್ರದಕ್ಷಿಣೆ ಹಾಕಲಾಯಿತು. ಕಂಠೀರವ ಸ್ಟುಡಿಯೊದಲ್ಲಿ ಅತೀವ ದುಃಖ ಮಡುಗಟ್ಟಿತ್ತು. ಡಾ.ರಾಜ್‌ಕುಮಾರ್‌ ಕುಟುಂಬದ ಎಲ್ಲರೂ ಅಂತಿಮ ನಮನ ಸಲ್ಲಿಸಿದರು. ಪ್ರೀತಿಯ ಸಹೋದರನನ್ನು ನೋಡುತ್ತ ಡಾ.ಶಿವರಾಜ್‌ಕುಮಾರ್‌ ಬಿಕ್ಕಿ ಬಿಕ್ಕಿ ಅತ್ತರು.

ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅವರ ಪತ್ನಿ ಮಂಗಳಾ, ಮಗ ಯುವ ರಾಜ್‌ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ನಟರಾದ ಉಪೇಂದ್ರ, ರವಿಚಂದ್ರನ್, ಯಶ್, ಜಗ್ಗೇಶ್, ಡಾಲಿ ಧನಂಜಯ, ದುನಿಯಾ ವಿಜಯ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಆರಗ ಜ್ಞಾನೇಂದ್ರ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.


ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...