Homeಮುಖಪುಟಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ : ನಟ ರಜನಿಕಾಂತ್

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ : ನಟ ರಜನಿಕಾಂತ್

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್), ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಕುರಿತು ರಾಜಕೀಯ ಪಕ್ಷಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿವೆ ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ದೇಶದಲ್ಲಿ ಮುಸ್ಲಿಮರಿಗೆ ಏನಾದರೂ ತೊಂದರೆಯಾದರೆ ನಾನು ಅವರ ಪರವಾಗಿ ದ್ವನಿ ಎತ್ತುತ್ತೇನೆ’ ಎಂದರು.

“ಈ ಕಾನೂನಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಸಿಎಎ ಮೇಲೆ ಭಯವನ್ನು ಹರಡುತ್ತಿವೆ ಇದು ತುಂಬಾ ತಪ್ಪು. ಸಿಎಎ ಭಾರತೀಯ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸ್ಪಷ್ಟವಾಗಿ ಹೇಳಿದೆ. ಇದು ನೆರೆಯ ರಾಷ್ಟ್ರಗಳ ನಿವಾಸಿಗಳಿಗೆ ಪೌರತ್ವ ನೀಡುವ ಕಾನೂನಾಗಿದೆ ” ಎಂದು ರಜನಿಕಾಂತ್ ಹೇಳಿದರು.

“ಇಲ್ಲಿ ಮುಸ್ಲಿಮರು ಚೆನ್ನಾಗಿಯೆ ಇದ್ದಾರೆ, ಅವರನ್ನು ಕೆಲವರು ಪ್ರಚೋದಿಸುತ್ತಿದ್ದಾರೆ, ವಿಭಜನೆಯ ಸಮಯದಲ್ಲಿ ಕೆಲವರು ಪಾಕಿಸ್ತಾನಕ್ಕೆ ಹೋದರೆ ಉಳಿದುಕೊಂಡಿರುವ ಮುಸ್ಲಿಮರು ಇದುವೆ ನಮ್ಮ ತಾಯಿನಾಡು ಎಂದು ನಿರ್ಧರಿಸಿ ಇಲ್ಲಿಯೆ ವಾಸಿಸುವುದಾಗಿ ಉಳಿದವರು, ಯಾರಾದರೂ ಅವರನ್ನು ದೇಶದಿಂದ ಹೊರಗೆ ಕಳುಹಿಸುವುದು ಹೇಗೆ? ಇಲ್ಲಿ ಮುಸ್ಲಿಮರಿಗೆ ಏನಾದರೂ ತೊಂದರೆಯಾದರೆ ನಾನು ಮೊದಲು ಧ್ವನಿ ಎತ್ತುತ್ತೇನೆ. ಎಂದಿದ್ದಾರೆ.

“ಸಿಎಎ ವಿರುದ್ಧ ಪ್ರತಿಭಟಿಸುವ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಮೊದಲು ಆಳವಾಗಿ ವಿಶ್ಲೇಷಿಸಬೇಕು. ಜೊತೆಗೆ ಪ್ರಾಧ್ಯಾಪಕರು ಅಥವಾ ಹಿರಿಯರೊಂದಿಗೆ ಮಾತುಕತೆ ನಡೆಸಬೇಕು. ಇಲ್ಲದಿದ್ದರೆ ರಾಜಕೀಯ ಮುಖಂಡರು ತಮ್ಮನ್ನು ಲಾಭಕ್ಕಾಗಿ ಬಳಸುತ್ತಾರೆ . ಒಂದು ವೇಳೆ ಎಫ್ಐಆರ್ ಆದರೆ ವಿದ್ಯಾರ್ಥಿಗಳು ತಮ್ಮ ಜೀವನವನ್ನೇ ಕಳೆದುಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ನಾಗರಿಕರು ಮತ್ತು ವಿದೇಶಿಯರ ನಡುವೆ ವ್ಯತ್ಯಾಸವನ್ನು ತೋರಿಸಲು ಎನ್‌ಪಿಆರ್ ಅತ್ಯಗತ್ಯ ಎಂದು ರಜನಿಕಾಂತ್ ಹೇಳಿದರು. “ಎನ್‌ಪಿಆರ್ ಅತ್ಯಗತ್ಯ, ಕಾಂಗ್ರೆಸ್ ಇದನ್ನು 2010 ರಲ್ಲಿ ಮಾಡಿತ್ತು, ಅದನ್ನು 2015 ರಲ್ಲಿಯೂ ಮಾಡಲಾಯಿತು ಹಾಗೂ ಅದನ್ನು 2021 ರಲ್ಲಿ ಜನಸಂಖ್ಯೆಗಾಗಿ ಮಾಡಬೇಕಾಗಿದೆ. ಈ ದೇಶದ ಎಲ್ಲ ನಾಗರಿಕರು ಮತ್ತು ಹೊರಗಿನಿಂದ ಬಂದವರು ಯಾರು ಎಂದು ನಮಗೆ ತಿಳಿಯಬೇಕಲ್ಲವೇ? ”ಎಂದು ಅವರು ಕೇಳಿದರು.

“ಎನ್‌ಆರ್‌ಸಿ ಇದು ಕರಡು ಮಾಡಿದ ನಂತರವೇ ವಿವರಗಳು ಹೊರಬರುತ್ತವೆ ಎನ್‌ಆರ್‌ಸಿ ಇನ್ನೂ ಜಾರಿಗೆ ಬಂದಿಲ್ಲ …ಅದು ಬಂದರೆ ಅದರ ವಿವರಗಳನ್ನು ತಿಳಿದುಕೊಳ್ಳುತ್ತೇನೆ.” ಎಂದರು

ಶ್ರೀಲಂಕಾದ ತಮಿಳರ ಬಗ್ಗೆ,”ಕಳೆದ 30 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಉಭಯ ಪೌರತ್ವವನ್ನು ನೀಡುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು. “ಶ್ರೀಲಂಕಾದಲ್ಲಿ ಇರುವ ತಮಿಳರಿಗೆ ತೊಂದರೆ ಕೊಡಬಾರದು, ಅವರು ಚೋಳರ ಕಾಲದಿಂದಲೂ ಅಲ್ಲಿ ವಾಸಿಸುತ್ತಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...