Homeಮುಖಪುಟಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ : ನಟ ರಜನಿಕಾಂತ್

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ : ನಟ ರಜನಿಕಾಂತ್

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್), ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಕುರಿತು ರಾಜಕೀಯ ಪಕ್ಷಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿವೆ ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ದೇಶದಲ್ಲಿ ಮುಸ್ಲಿಮರಿಗೆ ಏನಾದರೂ ತೊಂದರೆಯಾದರೆ ನಾನು ಅವರ ಪರವಾಗಿ ದ್ವನಿ ಎತ್ತುತ್ತೇನೆ’ ಎಂದರು.

“ಈ ಕಾನೂನಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಸಿಎಎ ಮೇಲೆ ಭಯವನ್ನು ಹರಡುತ್ತಿವೆ ಇದು ತುಂಬಾ ತಪ್ಪು. ಸಿಎಎ ಭಾರತೀಯ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸ್ಪಷ್ಟವಾಗಿ ಹೇಳಿದೆ. ಇದು ನೆರೆಯ ರಾಷ್ಟ್ರಗಳ ನಿವಾಸಿಗಳಿಗೆ ಪೌರತ್ವ ನೀಡುವ ಕಾನೂನಾಗಿದೆ ” ಎಂದು ರಜನಿಕಾಂತ್ ಹೇಳಿದರು.

“ಇಲ್ಲಿ ಮುಸ್ಲಿಮರು ಚೆನ್ನಾಗಿಯೆ ಇದ್ದಾರೆ, ಅವರನ್ನು ಕೆಲವರು ಪ್ರಚೋದಿಸುತ್ತಿದ್ದಾರೆ, ವಿಭಜನೆಯ ಸಮಯದಲ್ಲಿ ಕೆಲವರು ಪಾಕಿಸ್ತಾನಕ್ಕೆ ಹೋದರೆ ಉಳಿದುಕೊಂಡಿರುವ ಮುಸ್ಲಿಮರು ಇದುವೆ ನಮ್ಮ ತಾಯಿನಾಡು ಎಂದು ನಿರ್ಧರಿಸಿ ಇಲ್ಲಿಯೆ ವಾಸಿಸುವುದಾಗಿ ಉಳಿದವರು, ಯಾರಾದರೂ ಅವರನ್ನು ದೇಶದಿಂದ ಹೊರಗೆ ಕಳುಹಿಸುವುದು ಹೇಗೆ? ಇಲ್ಲಿ ಮುಸ್ಲಿಮರಿಗೆ ಏನಾದರೂ ತೊಂದರೆಯಾದರೆ ನಾನು ಮೊದಲು ಧ್ವನಿ ಎತ್ತುತ್ತೇನೆ. ಎಂದಿದ್ದಾರೆ.

“ಸಿಎಎ ವಿರುದ್ಧ ಪ್ರತಿಭಟಿಸುವ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಮೊದಲು ಆಳವಾಗಿ ವಿಶ್ಲೇಷಿಸಬೇಕು. ಜೊತೆಗೆ ಪ್ರಾಧ್ಯಾಪಕರು ಅಥವಾ ಹಿರಿಯರೊಂದಿಗೆ ಮಾತುಕತೆ ನಡೆಸಬೇಕು. ಇಲ್ಲದಿದ್ದರೆ ರಾಜಕೀಯ ಮುಖಂಡರು ತಮ್ಮನ್ನು ಲಾಭಕ್ಕಾಗಿ ಬಳಸುತ್ತಾರೆ . ಒಂದು ವೇಳೆ ಎಫ್ಐಆರ್ ಆದರೆ ವಿದ್ಯಾರ್ಥಿಗಳು ತಮ್ಮ ಜೀವನವನ್ನೇ ಕಳೆದುಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ನಾಗರಿಕರು ಮತ್ತು ವಿದೇಶಿಯರ ನಡುವೆ ವ್ಯತ್ಯಾಸವನ್ನು ತೋರಿಸಲು ಎನ್‌ಪಿಆರ್ ಅತ್ಯಗತ್ಯ ಎಂದು ರಜನಿಕಾಂತ್ ಹೇಳಿದರು. “ಎನ್‌ಪಿಆರ್ ಅತ್ಯಗತ್ಯ, ಕಾಂಗ್ರೆಸ್ ಇದನ್ನು 2010 ರಲ್ಲಿ ಮಾಡಿತ್ತು, ಅದನ್ನು 2015 ರಲ್ಲಿಯೂ ಮಾಡಲಾಯಿತು ಹಾಗೂ ಅದನ್ನು 2021 ರಲ್ಲಿ ಜನಸಂಖ್ಯೆಗಾಗಿ ಮಾಡಬೇಕಾಗಿದೆ. ಈ ದೇಶದ ಎಲ್ಲ ನಾಗರಿಕರು ಮತ್ತು ಹೊರಗಿನಿಂದ ಬಂದವರು ಯಾರು ಎಂದು ನಮಗೆ ತಿಳಿಯಬೇಕಲ್ಲವೇ? ”ಎಂದು ಅವರು ಕೇಳಿದರು.

“ಎನ್‌ಆರ್‌ಸಿ ಇದು ಕರಡು ಮಾಡಿದ ನಂತರವೇ ವಿವರಗಳು ಹೊರಬರುತ್ತವೆ ಎನ್‌ಆರ್‌ಸಿ ಇನ್ನೂ ಜಾರಿಗೆ ಬಂದಿಲ್ಲ …ಅದು ಬಂದರೆ ಅದರ ವಿವರಗಳನ್ನು ತಿಳಿದುಕೊಳ್ಳುತ್ತೇನೆ.” ಎಂದರು

ಶ್ರೀಲಂಕಾದ ತಮಿಳರ ಬಗ್ಗೆ,”ಕಳೆದ 30 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಉಭಯ ಪೌರತ್ವವನ್ನು ನೀಡುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು. “ಶ್ರೀಲಂಕಾದಲ್ಲಿ ಇರುವ ತಮಿಳರಿಗೆ ತೊಂದರೆ ಕೊಡಬಾರದು, ಅವರು ಚೋಳರ ಕಾಲದಿಂದಲೂ ಅಲ್ಲಿ ವಾಸಿಸುತ್ತಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...