Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...