Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...