Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...