Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....