Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...