Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...