Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...