Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...