Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...