Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...