Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...