Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...