Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...