Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...