Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...