Homeಮುಖಪುಟಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

"ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ"

- Advertisement -
- Advertisement -

ಖ್ಯಾತ ನಟಿ ಸಾಯಿ ಪಲ್ಲವಿ “ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿರುವುದಕ್ಕೂ ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ. ಧರ್ಮಕ್ಕಿಂತ ಮಾನಾವೀಯತೆ ಮುಖ್ಯ” ಎಂದು ಹೇಳಿದ್ದರು. ಈ ಹೇಳೀಕೆಯನ್ನು ತಪ್ಪಾಗಿ ವಿಮರ್ಶಿಸಿ ಅವರ ವಿರುದ್ಧ ಕೆಲವರು ಟ್ರೋಲ್ ಮಾಡಿದ್ದರು. ಈ ವಿವಾದಕ್ಕೆ ನಟಿ ಸಾಯಿ ಪಲ್ಲವಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

“ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ” ಎಂದು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರೇಟ್ ಆಂಧ್ರದ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ನಟಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರವನ್ನು ಖಂಡಿಸಿದ್ದರು. ಇದಕ್ಕೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆ ಹೆಸರಿನಲ್ಲಿ ನಡೆಯಯವ ಹತ್ಯೆಗಳನ್ನು ಉಲ್ಲೇಖಿಸಿದ್ದರು. ಆದರೆ, ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಅವರ ಒಂದ ನಿಮಿಷದ ಮಾತನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

 

View this post on Instagram

 

A post shared by Sai Pallavi (@saipallavi.senthamarai)

“ಮೊದಲ ಬಾರಿಗೆ ನನ್ನ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೊದಲು ನಾನು ಎರಡು ಬಾರಿ ಯೋಚಿಸುತ್ತಿದ್ದೇನೆ. ಏಕೆಂದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ, ನೀವು ಎಡಪಂಥೀಯಕ್ಕೆ ಬೆಂಬಲ ನೀಡುತ್ತೀರೋ ಅಥವಾ ಬಲಪಂಥೀಯಕ್ಕೆ ಬೆಂಬಲ ನೀಡುತ್ತೀರೋ? ಎಂಬ ಪ್ರಶ್ನೆ ಕೇಳಿದ್ದರು. ಆಗ ನಾನು ಸ್ಪಷ್ಟವಾಗಿ ನ್ಯೂಟ್ರಲ್ ಆಗಿದ್ದೇನೆ ಎಂದು ಹೇಳಿದೆ. ಜೊತೆಗೆ ನಾವು ಮೊದಲು ಮಾನವೀಯ ಮೌಲ್ಯಗಳಿರುವ ಉತ್ತಮ ಮನುಷ್ಯರಾಗಬೇಕು, ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು ಅಂತ ನಾನು ಹೇಳಿದ್ದೆ’ ಎಂದಿದ್ದಾರೆ.

“ಸಂದರ್ಶನದ ಮುಂದುವರಿದ ಭಾಗದಲ್ಲಿ ನಾನು ಉದಾಹರಣೆಯಾಗಿ ಎರಡು ವಿಷಯಗಳನ್ನು ಪ್ರಸ್ತಾಪ ಮಾಡಿದೆ. ನಾನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾದ ವೀಕ್ಷಿಸಿ ನಿರ್ದೇಶಕರೊಂದಿಗೆ ಮಾತನಾಡಿದ್ದೆ. ಜನರ ನೋವನ್ನು ಕಂಡು ನನಗೆ ಬೇಸರವಾಗಿದೆ ಎಂದು ನಿರ್ದೇಶಕರಿಗೆ ನಾನು ತಿಳಿಸಿದ್ದೆ. ಜೊತೆಗೆ ಕೊರೊನಾ ಸಮಯದಲ್ಲಿ ಹಲ್ಲೆಗೊಳದಾವರ ವಿಡಿಯೋ ನೋಡಿ ನನಗೆ ಬೇಸರ ಉಂಟಾಗಿತ್ತು. ಯಾವುದೇ ರೀತಿಯಲ್ಲಿ ಹಿಂಸೆ ಮಾಡುವುದು ಮತ್ತು ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವುದು ದೊಡ್ಡ ಪಾಪ ಎಂದು ನಾನು ನಂಬುತ್ತೇನೆ. ನಾನು ಹೇಳಲು ಉದ್ದೇಶಿಸಿದ್ದು ಇಷ್ಟೇ” ಎಂದಿದ್ದಾರೆ.

“ಆದರೆ, ವೆಬ್‌ಸೈಟ್‌ನಲ್ಲಿ ಅನೇಕರು ಗುಂಪು ಹತ್ಯೆ ಘಟನೆಯನ್ನು ಸಮರ್ಥಿಸಿಕೊಂಡಿರುವುದು ಆತಂಕಕಾರಿಯಾಗಿದೆ. ನಮ್ಮಲ್ಲಿ ಯಾರೊಬ್ಬರಿಗೂ ಇನ್ನೊಬ್ಬರ ಜೀವವನ್ನು ತೆಗೆಯುವ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ. ಮೆಡಿಕಲ್ ಗ್ರ್ಯಾಜುಯೇಟ್ ಆಗಿ ಎಲ್ಲರ ಜೀವ ಮುಖ್ಯ ಮತ್ತು ಸಮಾನ ಎಂದು ನಾನು ನಂಬುತ್ತೇನೆ. ಮುಂದೊಂದು ದಿನ ಇಲ್ಲಿ ಹುಟ್ಟುವ ಮಗು ತನ್ನ ಗುರುತನ್ನು ಹೇಳಲು ಹೆದರುವ ದಿನ ಬರುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ ಸಾಯಿ ಪಲ್ಲವಿ.

ಸಂದರ್ಶನವನ್ನು ಪೂರ್ತಿ ನೋಡದೆ ಬರೀ ಒಂದೆರಡು ನಿಮಿಷದ ವಿಡಿಯೋ ನೋಡಿ ಕಾಮೆಂಟ್ ಮಾಡುವವರ ವಿರುದ್ಧ ಬೇಸರ ವ್ಯಕ್ತ ಪಡಿಸಿರುವ ಅವರು, ತಮಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ತೆಲುಗು ಚಿತ್ರ “ವಿರಾಟ ಪರ್ವಂ” ಈ ವಾರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರಾಣಾ ದಗ್ಗುಬಾಟಿ ಜೊತೆಗೆ ನಟಿಸಿರುವ ಚಲನಚಿತ್ರವು 1990 ರ ದಶಕದ ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯನ ಪ್ರೇಮಕಥೆಯಾಗಿದೆ.


ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...