Homeಮುಖಪುಟನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ನಟ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರ ತರಿಸಲು ಸಿದ್ದತೆ ನಡೆಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

- Advertisement -
- Advertisement -

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಗುತ್ತಿಗೆ ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಆರೋಪಿಗಳು ಪಾಕಿಸ್ತಾನದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳಾದ ಎಕೆ 47, ಎಕೆ 92, ಎಂ 16 ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾದ ಟರ್ಕಿ ನಿರ್ಮಿತ ಜಿಗಾನಾ ಆಯುಧವನ್ನು ಖರೀದಿಸಲು ಸಿದ್ಧತೆ ನಡೆಸಿದ್ದರು ಎಂದು ಅವರು ಹೇಳಿದ್ದಾರೆ.

“ಆರೋಪಿಗಳು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರನ್ನು ನೇಮಿಸಿಕೊಂಡಿದ್ದಾರೆ. ಅವರೆಲ್ಲರೂ ಇದೀಗ ಪುಣೆ, ರಾಯಗಡ, ನವಿ ಮುಂಬೈ, ಥಾಣೆ ಮತ್ತು ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್ ಬಳಿ ಕೊಲ್ಲಲು ಯೋಜಿಸಿದ್ದರು ಎಂದು ನವಿ ಮುಂಬೈ ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಲ್ಮಾನ್ ಖಾನ್ ಹತ್ಯೆಗಾಗಿ ₹ 25 ಲಕ್ಷದ ಒಪ್ಪಂದ ಮಾಡಲಾಗಿದೆ ಎಂದು ಹೇಳಿರುವ ಪೊಲೀಸರು ಆರೋಪ ಪಟ್ಟಿಯಲ್ಲಿ ಐದು ಜನರನ್ನು ಹೆಸರಿಸಿದೆ. ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಗ್ಯಾಂಗ್ ಗುತ್ತಿಗೆಯನ್ನು ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಾಂದ್ರಾ ಮನೆ, ಪನ್ವೆಲ್ ಫಾರ್ಮ್‌ಹೌಸ್ ಮತ್ತು ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಸುಮಾರು 60 ರಿಂದ 70 ಜನರು ಸಲ್ಮಾನ್ ಖಾನ್ ಅವರ ಚಲನವಲನವನ್ನು ಗಮನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸಲ್ಮಾನ್ ಖಾನ್ ಅವರನ್ನು ಕೊಲ್ಲುವ ಯೋಜನೆಯನ್ನು ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ರೂಪಿಸಲಾಗಿತ್ತು ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ. ಗುರುವಾರ ಹರಿಯಾಣದ ಪಾಣಿಪತ್‌ನಿಂದ ಬಂಧಿತನಾಗಿದ್ದ ಸುಖ್ಖಾ, ನಿಯೋಜಿತ ಶೂಟರ್ ಅಜಯ್ ಕಶ್ಯಪ್ ಅಲಿಯಾಸ್ ಎಕೆ ಮತ್ತು ಪಿತೂರಿಯಲ್ಲಿ ಭಾಗಿಯಾಗಿರುವ ಇತರ ನಾಲ್ವರಿಗೆ ಹತ್ಯೆಯನ್ನು ನಿಯೋಜಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಸಲ್ಮಾನ್ ಖಾನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಶೂಟರ್‌ಗಳು ಕನ್ಯಾಕುಮಾರಿಯಿಂದ ದೋಣಿಯಲ್ಲಿ ಶ್ರೀಲಂಕಾಕ್ಕೆ ಪ್ರಯಾಣಿಸಿ ನಂತರ ಭಾರತೀಯ ತನಿಖಾ ಸಂಸ್ಥೆಗಳು ತಲುಪಲು ಸಾಧ್ಯವಾಗದ ದೇಶಕ್ಕೆ ಪರಾರಿಯಾಗಲು ಯೋಜಿಸಿದ್ದರು ಎಂದು ಕೂಡಾ ಆರೋಪಪಟ್ಟಿ ಹೇಳುತ್ತದೆ.

ಬಾಂದ್ರಾದಲ್ಲಿರುವ ಸಲ್ಮಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಘಟನೆಯನ್ನು ಪೊಲೀಸರು ತನಿಖೆ ನಡೆಸಿದಾಗ ಸಲ್ಮಾನ್ ಖಾನ್ ಅವರನ್ನು ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿ ಗುರಿಯಾಗಿಸುವ ಸಂಚು ಬಯಲಾಗಿತ್ತು. ಈ ನಡುವೆ, ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆಯ ನಂತರ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...