Homeಮುಖಪುಟನಟ ಸಮೀರ್ ಶರ್ಮಾ ಮುಂಬೈ ಮನೆಯಲ್ಲಿ ಶವವಾಗಿ ಪತ್ತೆ

ನಟ ಸಮೀರ್ ಶರ್ಮಾ ಮುಂಬೈ ಮನೆಯಲ್ಲಿ ಶವವಾಗಿ ಪತ್ತೆ

ಸಮೀರ್ ನಿಧನಕ್ಕೆ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ವರುಣ್ ಧವನ್ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

44 ವರ್ಷದ ಟಿ ವಿಯ ನಟ ಸಮೀರ್ ಶರ್ಮಾ ಅವರು ಬುಧವಾರ ತಡರಾತ್ರಿ ತಮ್ಮ ಮಲಾಡ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಲಾಡ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟ ಸಮೀರ್ ಶರ್ಮಾ ಮಲಾಡ್‌ನ (ಪಶ್ಚಿಮ) ಅಹಿನ್ಸಾ ಮಾರ್ಗದ ನೇಹಾ ಸಿಎಚ್‌ಎಸ್ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಿದ್ದರು ಎಂದು ಮಲಾಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಭದ್ರತಾ ಸಿಬ್ಬಂದಿಯೊಬ್ಬರು, ನಟ ಮೃತಪಟ್ಟಿರುವುದನ್ನು ಕಂಡು ಅಲ್ಲಿನ ಇತರ ಸದಸ್ಯರನ್ನು ಎಚ್ಚರಿಸಿದ್ದಾರೆ. ನಂತರ ಪೊಲೀಸರು ಇದನ್ನು ಆತ್ಮಹತ್ಯೆ ಶಂಕೆಯೆಂದು ಕರೆದಿದ್ದಾರೆ.

ನಾವು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ (ಎಡಿಆರ್), ಮತ್ತು ಅವರ ಶವವನ್ನು ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದೇವೆ ಎಂದು ಮಲಾಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಜಾರ್ಜ್ ಫರ್ನಾಂಡಿಸ್ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಅವರು ಫೆಬ್ರವರಿಯಲ್ಲಿ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದರು. ಈಗ ಪ್ರಕರಣದ ತನಿಖೆ ಮುಂದುವರೆದಿದೆ.

ಸಮೀರ್ ಶರ್ಮಾ ಕಹಾನಿ ಘರ್ ಘರ್ ಕಿ, ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ, ಜ್ಯೋತಿ, ಇಸ್ ಪ್ಯಾರ್ ಕೋ ಕ್ಯಾ ನಾಮ್ ಡು ಮತ್ತು ಲೆಫ್ಟ್‌ ರೈಟ್ ಮುಂತಾದ ಕಾರ್ಯಕ್ರಮಗಳಲ್ಲಿ ನಟಿಸಿದ್ದಾರೆ. ಹಸೀ ತೋಹ್ ಫಾಸೀ ಮತ್ತು ಇಟ್ಟೆಫಾಕ್ ಮುಂತಾದ ಚಿತ್ರಗಳಲ್ಲಿ ಗುರುತಿಸಿಕೊಂಡಿದ್ದರು.

ಸಮೀರ್ ನಿಧನಕ್ಕೆ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ವರುಣ್ ಧವನ್ ಸಂತಾಪ ಸೂಚಿಸಿದ್ದಾರೆ.

ಅವರ ಕೊನೆಯ ಸೋಷಿಯಲ್ ಮೀಡಿಯಾ ಪೋಸ್ಟ್, ಸಮುದ್ರದ ಚಿತ್ರವನ್ನು ಜುಲೈ 29 ರಂದು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳಲಾಗಿದೆ.

2020 ರಲ್ಲಿ, ಚಲನಚಿತ್ರ ಮತ್ತು ದೂರದರ್ಶನ ಉದ್ಯಮಗಳಲ್ಲಿ ಮನ್ಮೀತ್ ಗ್ರೆವಾಲ್, ಪ್ರೇಕ್ಷಾ ಮೆಹ್ತಾ, ಮತ್ತು ಸುಶಾಂತ್ ಸಿಂಗ್ ರಜಪೂತ್ ಸೇರಿದಂತೆ ಹಲವಾರು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...