Homeಕರ್ನಾಟಕನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

- Advertisement -
- Advertisement -

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್‌ ಅವರಿಗೆ ಜಾಮೀನು ದೊರೆತಿದೆ.

ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿತ್ತು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಕಾರ್ಮಿಕನ ಹತ್ಯೆ – ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...