Homeಕರ್ನಾಟಕನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

- Advertisement -
- Advertisement -

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್‌ ಅವರಿಗೆ ಜಾಮೀನು ದೊರೆತಿದೆ.

ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿತ್ತು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಕಾರ್ಮಿಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....