Homeಮುಖಪುಟಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

- Advertisement -
- Advertisement -

ಕೊರೊನಾ ಕಾಲದ ಆಪದ್ಬಾಂಧವನಾಗಿದ್ದ ಬಹುಭಾಷಾ ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಮತ್ತೊಮ್ಮೆ ತಾವು ನಿಜ ಜೀವನದ ಹೀರೋ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ಮನೆಗಳನ್ನು ತಲುಪುವಲ್ಲಿ ನಟ ಸೋನು ಸೂದ್ ಚಾರಿಟಿ ಸಂಸ್ಥೆ ಸಹಾಯಕಕೆ ನಿಂತಿದೆ. ಅಲ್ಲಿನ ವಿದ್ಯಾರ್ಥಿಗಳು ಸೂಕ್ತವಾಗಿ ಗಡಿಗಳನ್ನು ತಲುಪಲು, ಅಲ್ಲಿಂದ ದೇಶಕ್ಕೆ ಬರುವಲ್ಲಿ ಇವರು ಸಹಾಯ ಮಾಡುತ್ತಿದ್ದಾರೆ. ಸೋನು ಸೂದ್ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಹಲವರು ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

“ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳಿಗೆ ಇದು ಕಷ್ಟದ ಸಮಯ ಮತ್ತು ಇಲ್ಲಿಯವರೆಗಿನ ನನ್ನ ಕೆಲಸಗಳಲ್ಲಿ ಅತೀ ಕಠಿಣ ಕೆಲಸ ಇದು. ಆದರೆ,  ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳಿಗೆ ಗಡಿ ದಾಟಿ ಸುರಕ್ಷಿತ ಪ್ರದೇಶಕ್ಕೆ ಹೋಗಲು ಸಹಾಯ ಮಾಡಿದ್ದೇವೆ. ಇದಕ್ಕಾಗಿ ಪ್ರಯತ್ನಿಸುತ್ತಲೇ ಇರೋಣ. ಅವರಿಗೆ ನಮ್ಮ ಅವಶ್ಯಕತೆಯಿದೆ” ಎಂದು ಸೋನು ಸೂದ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ನಟ ಸೋನು ಸೂದ್ ಕಾರನ್ನು ವಶಕ್ಕೆ ಪಡೆದ ಪೊಲೀಸರು

 

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ಸೋನು ಸೂದ್ ಜನರ ಮನಗೆದ್ದಿದ್ದರು. ಅಂದಿನಿಂದ ಅವರು ಜನರಿಗಾಗಿ ಕೆಲಸ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಗಳಿಸಿದ್ದಾರೆ. ಈಗ ಯುದ್ಧ ಪೀಡಿತ ಉಕ್ರೇನ್‌ನ ಹಲವು ನಗರಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ನಟ ಮತ್ತು ಆತನ ತಂಡ ಈಗ ಸಹಾಯ ಮಾಡುತ್ತಿದೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಯೋಜನೆಯನ್ನು ವಿವರಿಸಿರುವ ನಟ ಸೋನು ಸೂದ್, “ಸ್ಥಳೀಯ ಟ್ಯಾಕ್ಸಿಗಳನ್ನು ವಿದ್ಯಾರ್ಥಿಗಳಿರುವ ಸ್ಥಳಕ್ಕೆ ಕಳುಹಿಸಲಾಗುತ್ತದೆ, ಅಲ್ಲಿಂದ ಅವರನ್ನು ಖಾರ್ಕಿವ್‌ನ ರೈಲು ನಿಲ್ದಾಣಕ್ಕೆ ಕರೆದೊಯ್ಯಲಾಗುತ್ತದೆ.  ಅಲ್ಲಿಂದ ಅವರು ರೈಲಿನಲ್ಲಿ ಎಲ್ವಿವ್ ನಗರದ ಸುರಕ್ಷಿತ ಸ್ಥಳಕ್ಕೆ ಪ್ರಯಾಣಿಸುತ್ತಾರೆ. ಬಳಿಕ ಅವರನ್ನು ಪೋಲಿಷ್ ಗಡಿಗೆ ಸಾಗಿಸಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ” ಎಂದಿದ್ದಾರೆ. ಪ್ರತಿಯೊಂದು ಹಂತಗಳನ್ನು ನಟ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಡೇಟ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...