Homeಮುಖಪುಟಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

- Advertisement -
- Advertisement -

ಕೊರೊನಾ ಕಾಲದ ಆಪದ್ಬಾಂಧವನಾಗಿದ್ದ ಬಹುಭಾಷಾ ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಮತ್ತೊಮ್ಮೆ ತಾವು ನಿಜ ಜೀವನದ ಹೀರೋ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ಮನೆಗಳನ್ನು ತಲುಪುವಲ್ಲಿ ನಟ ಸೋನು ಸೂದ್ ಚಾರಿಟಿ ಸಂಸ್ಥೆ ಸಹಾಯಕಕೆ ನಿಂತಿದೆ. ಅಲ್ಲಿನ ವಿದ್ಯಾರ್ಥಿಗಳು ಸೂಕ್ತವಾಗಿ ಗಡಿಗಳನ್ನು ತಲುಪಲು, ಅಲ್ಲಿಂದ ದೇಶಕ್ಕೆ ಬರುವಲ್ಲಿ ಇವರು ಸಹಾಯ ಮಾಡುತ್ತಿದ್ದಾರೆ. ಸೋನು ಸೂದ್ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಹಲವರು ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

“ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳಿಗೆ ಇದು ಕಷ್ಟದ ಸಮಯ ಮತ್ತು ಇಲ್ಲಿಯವರೆಗಿನ ನನ್ನ ಕೆಲಸಗಳಲ್ಲಿ ಅತೀ ಕಠಿಣ ಕೆಲಸ ಇದು. ಆದರೆ,  ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳಿಗೆ ಗಡಿ ದಾಟಿ ಸುರಕ್ಷಿತ ಪ್ರದೇಶಕ್ಕೆ ಹೋಗಲು ಸಹಾಯ ಮಾಡಿದ್ದೇವೆ. ಇದಕ್ಕಾಗಿ ಪ್ರಯತ್ನಿಸುತ್ತಲೇ ಇರೋಣ. ಅವರಿಗೆ ನಮ್ಮ ಅವಶ್ಯಕತೆಯಿದೆ” ಎಂದು ಸೋನು ಸೂದ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ನಟ ಸೋನು ಸೂದ್ ಕಾರನ್ನು ವಶಕ್ಕೆ ಪಡೆದ ಪೊಲೀಸರು

 

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ಸೋನು ಸೂದ್ ಜನರ ಮನಗೆದ್ದಿದ್ದರು. ಅಂದಿನಿಂದ ಅವರು ಜನರಿಗಾಗಿ ಕೆಲಸ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಗಳಿಸಿದ್ದಾರೆ. ಈಗ ಯುದ್ಧ ಪೀಡಿತ ಉಕ್ರೇನ್‌ನ ಹಲವು ನಗರಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ನಟ ಮತ್ತು ಆತನ ತಂಡ ಈಗ ಸಹಾಯ ಮಾಡುತ್ತಿದೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಯೋಜನೆಯನ್ನು ವಿವರಿಸಿರುವ ನಟ ಸೋನು ಸೂದ್, “ಸ್ಥಳೀಯ ಟ್ಯಾಕ್ಸಿಗಳನ್ನು ವಿದ್ಯಾರ್ಥಿಗಳಿರುವ ಸ್ಥಳಕ್ಕೆ ಕಳುಹಿಸಲಾಗುತ್ತದೆ, ಅಲ್ಲಿಂದ ಅವರನ್ನು ಖಾರ್ಕಿವ್‌ನ ರೈಲು ನಿಲ್ದಾಣಕ್ಕೆ ಕರೆದೊಯ್ಯಲಾಗುತ್ತದೆ.  ಅಲ್ಲಿಂದ ಅವರು ರೈಲಿನಲ್ಲಿ ಎಲ್ವಿವ್ ನಗರದ ಸುರಕ್ಷಿತ ಸ್ಥಳಕ್ಕೆ ಪ್ರಯಾಣಿಸುತ್ತಾರೆ. ಬಳಿಕ ಅವರನ್ನು ಪೋಲಿಷ್ ಗಡಿಗೆ ಸಾಗಿಸಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ” ಎಂದಿದ್ದಾರೆ. ಪ್ರತಿಯೊಂದು ಹಂತಗಳನ್ನು ನಟ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಡೇಟ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....