Homeಕರೋನಾ ತಲ್ಲಣನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಟ ಸೋನು ಸೂದ್ ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಹಿನ್ನೆಲೆ  ಲಾಕ್‌ಡೌನ್ ಘೋಷಿಸಿದ್ದ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ನೆರವಾಗಿ ನಿಜ ಜೀವನದ ನಾಯಕ ಎನಿಸಿಕೊಂಡಿದ್ದ ನಟ ಸೋನು ಸೂದ್ ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರ ಸಹಾಯಕ್ಕೆ ಬರದಿದ್ದರೂ, ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಲಾಕ್​ಡೌನ್​ ಆರಂಭದಿಂದ ಇಂದಿನವರೆಗೂ ನಟ ಒಂದಲ್ಲ ಒಂದು ಸಹಾಯ ಮಾಡುತ್ತಲೇ ಬರುತ್ತಿದ್ದಾರೆ.

Won't relax until the last migrant worker reaches home, says Sonu Sood | People News | Zee News

ಇದನ್ನೂ ಓದಿ: ನಟ ಸೋನು ಸೂದ್ ಟ್ರಾಕ್ಟರ್ ಕೊಡಿಸಿದ್ದ ದಲಿತ ಕುಟುಂಬಕ್ಕೆ ರಾಜಕೀಯ ಕಿರುಕುಳ!

ವಿಶ್ವಸಂಸ್ಥೆಯ ಈ ಗೌರವವನ್ನು ಪಡೆದ ಪ್ರಿಯಾಂಕಾ ಚೋಪ್ರಾ, ಲಿಯೊನಾರ್ಡೊ ಡಿಕಾಪ್ರಿಯೊ, ಏಂಜಲೀನಾ ಜೋಲೀ, ಡೇವಿಡ್ ಬೆಕ್‌ಹ್ಯಾಮ್, ಎಮ್ಮಾ ವ್ಯಾಟ್ಸನ್, ಲಿಯಾಮ್ ನೀಸನ್, ಕೇಟ್ ಬ್ಲಾಂಚೆಟ್, ಆಂಟೋನಿಯೊ ಬಾಂಡೆರಾಸ್ ಮತ್ತು ನಿಕೋಲ್ ಕಿಡ್ಮನ್ ಅವರ ಸಾಲಿಗೆ ಸೋನು ಸೂದ್ ಸೇರ್ಪಡೆಗೊಂಡಿದ್ದಾರೆ.

ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಲು ಲಾಕ್‌ಡೌನ್ ಸಮಯದಲ್ಲಿ ಟೋಲ್-ಫ್ರೀ ಸಹಾಯವಾಣಿಯನ್ನು ಸಹ ಪ್ರಾರಂಭಿಸಿದ್ದರು.

ವಿಶ್ವಸಂಸ್ಥೆಯ ಪ್ರಶಸ್ತಿ ಬಂದಿರುವ ಹಿನ್ನೆಲೆ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನಟಿ ಪ್ರಿಯಾಂಕಾ ಛೋಪ್ರಾ ಕೂಡ ಅಭಿನಂದನೆ ಸಲ್ಲಿಸಿ ಪ್ರಶಸ್ತಿಗೆ ನೀವು ಅರ್ಹರು ಎಂದಿದ್ದಾರೆ.

ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ಪ್ರಿಯಾಂಕಾ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸೋನುಸೂದ್ ಧನ್ಯವಾದ ಸಲ್ಲಿಸಿದ್ದಾರೆ. ನಿಮ್ಮ ಸ್ಪೂರ್ತಿಯಿಂದ ಇದು ಸಾಧ್ಯ. ನೀವು ನಮ್ಮ ನಿಜವಾದ ಹೀರೋ ಎಂದಿದ್ದಾರೆ.

ಸದ್ಯ ನಟ ಹೈದರಾಬಾದ್‌ನಲ್ಲಿ ಬೆಲ್ಲಂಕೊಂಡ ಶ್ರೀನಿವಾಸ್, ಪ್ರಕಾಶ್ ರಾಜ್ ಮತ್ತು ನಲು ನಟೇಶ್ ಅವರೊಂದಿಗೆ ಅಲ್ಲುಡು ಅದುರ್ಸ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಸೆಟ್‌ನಲ್ಲಿ ಅವರನ್ನು ಸಹ ಕಲಾವಿದರು ಅಭಿನಂದಿಸಿದ್ದಾರೆ.

Image
PC: BRAHMAJI@Twitter

ಸೋನು ಸೂದ್ ಹಲವಾರು ಹಿಂದಿ, ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 1999 ರ ತಮಿಳು ಚಿತ್ರ ’ಕಲಹಗಾರ್‌’ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. 2002ರಲ್ಲಿ ಚಲನಚಿತ್ರ ಶಹೀದ್-ಇ-ಅಜಮ್ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟರು. ಸೋನು ಸೂದ್ ದಬಾಂಗ್, ಯುವ, ಅಥಾಡು, ಅರುಂಧತಿ, ಜೋಧಾ ಅಕ್ಬರ್, ದೂಕುಡು, ಶೂಟೌಟ್ ಅಟ್ ವಡಾಲಾ, ಹ್ಯಾಪಿ ನ್ಯೂ ಇಯರ್, ಸಿಂಬಾ ಮುಂತಾದ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: NEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...