Homeಕರೋನಾ ತಲ್ಲಣನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಟ ಸೋನು ಸೂದ್ ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಹಿನ್ನೆಲೆ  ಲಾಕ್‌ಡೌನ್ ಘೋಷಿಸಿದ್ದ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ನೆರವಾಗಿ ನಿಜ ಜೀವನದ ನಾಯಕ ಎನಿಸಿಕೊಂಡಿದ್ದ ನಟ ಸೋನು ಸೂದ್ ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರ ಸಹಾಯಕ್ಕೆ ಬರದಿದ್ದರೂ, ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಲಾಕ್​ಡೌನ್​ ಆರಂಭದಿಂದ ಇಂದಿನವರೆಗೂ ನಟ ಒಂದಲ್ಲ ಒಂದು ಸಹಾಯ ಮಾಡುತ್ತಲೇ ಬರುತ್ತಿದ್ದಾರೆ.

Won't relax until the last migrant worker reaches home, says Sonu Sood | People News | Zee News

ಇದನ್ನೂ ಓದಿ: ನಟ ಸೋನು ಸೂದ್ ಟ್ರಾಕ್ಟರ್ ಕೊಡಿಸಿದ್ದ ದಲಿತ ಕುಟುಂಬಕ್ಕೆ ರಾಜಕೀಯ ಕಿರುಕುಳ!

ವಿಶ್ವಸಂಸ್ಥೆಯ ಈ ಗೌರವವನ್ನು ಪಡೆದ ಪ್ರಿಯಾಂಕಾ ಚೋಪ್ರಾ, ಲಿಯೊನಾರ್ಡೊ ಡಿಕಾಪ್ರಿಯೊ, ಏಂಜಲೀನಾ ಜೋಲೀ, ಡೇವಿಡ್ ಬೆಕ್‌ಹ್ಯಾಮ್, ಎಮ್ಮಾ ವ್ಯಾಟ್ಸನ್, ಲಿಯಾಮ್ ನೀಸನ್, ಕೇಟ್ ಬ್ಲಾಂಚೆಟ್, ಆಂಟೋನಿಯೊ ಬಾಂಡೆರಾಸ್ ಮತ್ತು ನಿಕೋಲ್ ಕಿಡ್ಮನ್ ಅವರ ಸಾಲಿಗೆ ಸೋನು ಸೂದ್ ಸೇರ್ಪಡೆಗೊಂಡಿದ್ದಾರೆ.

ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಲು ಲಾಕ್‌ಡೌನ್ ಸಮಯದಲ್ಲಿ ಟೋಲ್-ಫ್ರೀ ಸಹಾಯವಾಣಿಯನ್ನು ಸಹ ಪ್ರಾರಂಭಿಸಿದ್ದರು.

ವಿಶ್ವಸಂಸ್ಥೆಯ ಪ್ರಶಸ್ತಿ ಬಂದಿರುವ ಹಿನ್ನೆಲೆ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನಟಿ ಪ್ರಿಯಾಂಕಾ ಛೋಪ್ರಾ ಕೂಡ ಅಭಿನಂದನೆ ಸಲ್ಲಿಸಿ ಪ್ರಶಸ್ತಿಗೆ ನೀವು ಅರ್ಹರು ಎಂದಿದ್ದಾರೆ.

ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ಪ್ರಿಯಾಂಕಾ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸೋನುಸೂದ್ ಧನ್ಯವಾದ ಸಲ್ಲಿಸಿದ್ದಾರೆ. ನಿಮ್ಮ ಸ್ಪೂರ್ತಿಯಿಂದ ಇದು ಸಾಧ್ಯ. ನೀವು ನಮ್ಮ ನಿಜವಾದ ಹೀರೋ ಎಂದಿದ್ದಾರೆ.

ಸದ್ಯ ನಟ ಹೈದರಾಬಾದ್‌ನಲ್ಲಿ ಬೆಲ್ಲಂಕೊಂಡ ಶ್ರೀನಿವಾಸ್, ಪ್ರಕಾಶ್ ರಾಜ್ ಮತ್ತು ನಲು ನಟೇಶ್ ಅವರೊಂದಿಗೆ ಅಲ್ಲುಡು ಅದುರ್ಸ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಸೆಟ್‌ನಲ್ಲಿ ಅವರನ್ನು ಸಹ ಕಲಾವಿದರು ಅಭಿನಂದಿಸಿದ್ದಾರೆ.

Image
PC: BRAHMAJI@Twitter

ಸೋನು ಸೂದ್ ಹಲವಾರು ಹಿಂದಿ, ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 1999 ರ ತಮಿಳು ಚಿತ್ರ ’ಕಲಹಗಾರ್‌’ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. 2002ರಲ್ಲಿ ಚಲನಚಿತ್ರ ಶಹೀದ್-ಇ-ಅಜಮ್ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟರು. ಸೋನು ಸೂದ್ ದಬಾಂಗ್, ಯುವ, ಅಥಾಡು, ಅರುಂಧತಿ, ಜೋಧಾ ಅಕ್ಬರ್, ದೂಕುಡು, ಶೂಟೌಟ್ ಅಟ್ ವಡಾಲಾ, ಹ್ಯಾಪಿ ನ್ಯೂ ಇಯರ್, ಸಿಂಬಾ ಮುಂತಾದ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: NEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...