HomeಮುಖಪುಟNEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

NEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

ಖ್ಯಾತ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹಲವುರು ಪರೀಕ್ಷೆ ಮುಂದೂಡಲು ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ಸೆಪ್ಟಂಬರ್ ಮೊದಲಾರ್ಧದಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರವ್ಯಾಪಿ NEET, JEE ಪರೀಕ್ಷೆಗಳನ್ನು ಮುಂದೂಡುವಂತೆ ನಟ ಸೋನು ಸೂದ್ ಆಗ್ರಹಿಸಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಸಹಾಯ ಮಾಡಿ ವ್ಯಾಪಕ ಮೆಚ್ಚುಗೆ ಗಳಿಸಿದ್ದ ನಟ ಸೂದ್ ಸಾಂಕ್ರಾಮಿಕ ಕಾಲದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಒತ್ತಾಯಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

26 ಲಕ್ಷ ವಿದ್ಯಾರ್ಥಿಗಳು NEET ವೈದ್ಯಕೀಯ ಅರ್ಹತಾ ಪರೀಕ್ಷೆ ಮತ್ತು JEE ಐಐಟಿ ಅರ್ಹತ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದು, ಕೊರೊನಾ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಪರೀಕ್ಷೆ ನಡೆಸಿಯೇ ಸಿದ್ದ ಎಂದು ಘೋಷಿಸಿದೆ. ಈ ಕುರಿತು ದಾಖಲಾದ ಪಿಐಎಲ್‌ ಅನ್ನು ಕೂಡ ಸುಪ್ರೀಂ ವಜಾಗೊಳಿಸಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕದಲ್ಲಿದ್ದಾರೆ. ಹಾಗಾಗಿ ಅವರಿಗೆ ನೆರವಾಗಲು ಕನಿಷ್ಠ ಮೂರು ತಿಂಗಳ ಕಾಲ ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ಸೋನು ಸೂದ್ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಬಾರಿ ಬಿಹಾರದ ಅತಿ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ದತೆ ನಡೆಸಿದ್ದಾರೆ. ಆದರೆ ಅಲ್ಲಿ ಸಂಭವಿಸಿದ ಭಾರೀ ಪ್ರವಾಹದಿಂದಾಗಿ 13-14 ಜಿಲ್ಲೆಗಳು ತೀವ್ರ ಸಂಕಷ್ಟದಲ್ಲಿವೆ. ಅವರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲ. ನಗರಗಳಲ್ಲಿ ಉಳಿಯಲು ಆರ್ಥಿಕ ಸಹಾಯವಿಲ್ಲ. ಹೀಗಿರುವಾಗ ಆ ವಿದ್ಯಾರ್ಥಿಗಳನ್ನು ಮನೆಯಿಂದ ಹೊರಬಂದು ಪರೀಕ್ಷೆ ಬರೆಯಿರಿ ಎಂದು ಹೇಗೆ ಹೇಳಲು ಸಾಧ್ಯ ಎಂದು ಸೂದ್ ಪ್ರಶ್ನಿಸಿದ್ದಾರೆ.

ನಾನು ಒಬ್ಬ ಇಂಜಿನಿಯರ್. ವಿದ್ಯಾರ್ಥಿಗಳ ಆಸೆ ಆಕಾಂಕ್ಷೆ ನನಗೆ ಗೊತ್ತಿದೆ. ಈ ದೇಶದ ಹಲವು ವಿಭಾಗಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆಯುವಂತ ವಾತವರಣ ನಿರ್ಮಿಸಬೇಕೆಂದು ಸೂದ್ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಪರೀಕ್ಷೆ ನಡೆಸುವ ಕೇಂದ್ರದ ತೀರ್ಮಾವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಒತ್ತಾಯವಾಗಿದ್ದು ಈಗಾಗಲೇ ಶೆ.80 ರಷ್ಟು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಅವರೆಲ್ಲರೂ ಪರೀಕ್ಷೆ ಬರೆಯುತ್ತಾರೆ ಎಂದು ದೂರದರ್ಶನದೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಬಹಳಷ್ಟು ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷೆ ಬರೆಯಲು ನಾವು ಇನ್ನು ಎಷ್ಟು ಕಾಲ ಕಾಯಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಪರೀಕ್ಷೆ ಮುಂದೂಡುವುದಿಲ್ಲ. ಸಾಮಾಜಿಕ ಅಂತರದ ಸುರಕ್ಷಾ ನಿಯಮಗಳನ್ನು ಕಾಯ್ದುಕೊಂಡು ಪರೀಕ್ಷೆ ನಡೆಸುತ್ತೇವೆ ಎಂದಿದ್ದಾರೆ.

ಖ್ಯಾತ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹಲವುರು ಪರೀಕ್ಷೆ ಮುಂದೂಡಲು ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಬಟ್ ಸರ್ ಕಾಮಿಕ್ಸ್ ಹೆಸರಿನಲ್ಲಿ ವ್ಯಂಗ್ಯ ಮಾಡುವ ಡೂಡಲ್‌ಗಾರ ಅರವಿಂದ್ ತೆಗ್ಗಿನಮಠರವರು ಸರ್ಕಾರಕ್ಕೆ ಪರೀಕ್ಷೆ ಮುಂದೂಡುವ ಆಕಾಂಕ್ಷೆಯಿದೆ. ಆದರೆ ಅದನ್ನು ಯಾವಾಗ ಘೋಷಿಸಿದರೆ ಹೆಚ್ಚಿನ ರಾಜಕೀಯ ಲಾಭ ದೊರಕುತ್ತದೆ ಎಂದು ಪ್ರಧಾನಿಗಳು ಯೋಚಿಸುತ್ತಿದ್ದಾರೆ ಎಂದು ರಚಿಸಿರುವ ಡೂಡಲ್‌ ಟ್ವಿಟ್ಟರ್‌ನಲ್ಲಿ ಗಮನ ಸೆಳೆದಿದೆ.

ಇನ್ನು ಪರೀಕ್ಷೆ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ವಿರೋಧ ಪಕ್ಷಗಳು ಇಂದು ಸಭೆ ಸೇರುತ್ತಿವೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...