Homeಮುಖಪುಟಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೇಜ್ರಿವಾಲ್‌ -ಸೋನು ಸೂದ್‌ ಭೇಟಿ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

- Advertisement -
- Advertisement -

ಕೊರೊನಾ ಕಾಲದ ಬಡವರ ಆಪದ್ಬಾಂಧವ ಅನಿಸಿಕೊಂಡಿದ್ದ ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ ಕೇಳಿ ಬಂದಿದ್ದು, 20 ಕೋಟಿಗೂ ಅಧಿಕ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸತತ ಮೂರು ದಿನಗಳ ಕಾಲ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಸೋನು ಸೂದ್ ಅವರ ಲಾಭರಹಿತ ಎನ್‌ಜಿಒ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಎಂದು ತೆರಿಗೆ ಇಲಾಖೆ ತಿಳಿಸಿದೆ.

“ಆದಾಯ ತೆರಿಗೆ ಇಲಾಖೆಯ ಶೋಧದ ಸಮಯದಲ್ಲಿ, ನಟ ಮತ್ತು ಆತನ ಸಹಚರರು ತೆರಿಗೆ ವಂಚನೆ ನಡೆಸಿರುವ ಬಗ್ಗೆ ಸಾಕ್ಷ್ಯಗಳು ದೊರೆತಿವೆ. ನಟ ಓನು ಸೂದ್ ತಮ್ಮ ಲೆಕ್ಕವಿಲ್ಲದ ಆದಾಯವನ್ನು ನಕಲಿ ವಿಧಾನದಲ್ಲಿ ಸಾಲದ ರೂಪದಲ್ಲಿ ಪಡೆದಿದ್ದಾರೆ” ಎಂದು ಇಲಾಖೆ ಹೇಳಿಕೆಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೊರೊನಾ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಸೂದ್ ಚಾರಿಟಿ ಫೌಂಡೇಶನ್, ಈ ವರ್ಷದ ಏಪ್ರಿಲ್ ಒಳಗೆ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಲಾಗಿದೆ. ಉಳಿದ 17 ಕೋಟಿ ರೂಪಾಯಿಗಳನ್ನು ಸೂದ್ ಚಾರಿಟಿ ಫೌಂಡೇಶನ್ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಹಾಗೆ ಉಳಿದಿದೆ ಎನ್ನಲಾಗಿದೆ.


ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...