Homeಮುಖಪುಟಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೇಜ್ರಿವಾಲ್‌ -ಸೋನು ಸೂದ್‌ ಭೇಟಿ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

- Advertisement -
- Advertisement -

ಕೊರೊನಾ ಕಾಲದ ಬಡವರ ಆಪದ್ಬಾಂಧವ ಅನಿಸಿಕೊಂಡಿದ್ದ ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ ಕೇಳಿ ಬಂದಿದ್ದು, 20 ಕೋಟಿಗೂ ಅಧಿಕ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸತತ ಮೂರು ದಿನಗಳ ಕಾಲ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಸೋನು ಸೂದ್ ಅವರ ಲಾಭರಹಿತ ಎನ್‌ಜಿಒ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಎಂದು ತೆರಿಗೆ ಇಲಾಖೆ ತಿಳಿಸಿದೆ.

“ಆದಾಯ ತೆರಿಗೆ ಇಲಾಖೆಯ ಶೋಧದ ಸಮಯದಲ್ಲಿ, ನಟ ಮತ್ತು ಆತನ ಸಹಚರರು ತೆರಿಗೆ ವಂಚನೆ ನಡೆಸಿರುವ ಬಗ್ಗೆ ಸಾಕ್ಷ್ಯಗಳು ದೊರೆತಿವೆ. ನಟ ಓನು ಸೂದ್ ತಮ್ಮ ಲೆಕ್ಕವಿಲ್ಲದ ಆದಾಯವನ್ನು ನಕಲಿ ವಿಧಾನದಲ್ಲಿ ಸಾಲದ ರೂಪದಲ್ಲಿ ಪಡೆದಿದ್ದಾರೆ” ಎಂದು ಇಲಾಖೆ ಹೇಳಿಕೆಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೊರೊನಾ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಸೂದ್ ಚಾರಿಟಿ ಫೌಂಡೇಶನ್, ಈ ವರ್ಷದ ಏಪ್ರಿಲ್ ಒಳಗೆ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಲಾಗಿದೆ. ಉಳಿದ 17 ಕೋಟಿ ರೂಪಾಯಿಗಳನ್ನು ಸೂದ್ ಚಾರಿಟಿ ಫೌಂಡೇಶನ್ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಹಾಗೆ ಉಳಿದಿದೆ ಎನ್ನಲಾಗಿದೆ.


ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...