Homeಮುಖಪುಟಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ಕೇಜ್ರಿವಾಲ್‌ -ಸೋನು ಸೂದ್‌ ಭೇಟಿ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

- Advertisement -
- Advertisement -

ಕೊರೊನಾ ಕಾಲದ ಬಡವರ ಆಪದ್ಬಾಂಧವ ಅನಿಸಿಕೊಂಡಿದ್ದ ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ ಕೇಳಿ ಬಂದಿದ್ದು, 20 ಕೋಟಿಗೂ ಅಧಿಕ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸತತ ಮೂರು ದಿನಗಳ ಕಾಲ ನಟ ಸೋನು ಸೂದ್‌ ಅವರಿಗೆ ಸೇರಿದ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಸೋನು ಸೂದ್‌ ಭೇಟಿಯಾದ ಬೆನ್ನಲ್ಲೇ ನಡೆದಿರುವ ಈ ಕಾರ್ಯಾಚರಣೆ ರಾಜಕೀಯ ಪ್ರೇರಿತ ಎಂಬ ಟೀಕೆಗಳಿಗೂ ಗುರಿಯಾಗಿದೆ.

ಸೋನು ಸೂದ್ ಅವರ ಲಾಭರಹಿತ ಎನ್‌ಜಿಒ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಎಂದು ತೆರಿಗೆ ಇಲಾಖೆ ತಿಳಿಸಿದೆ.

“ಆದಾಯ ತೆರಿಗೆ ಇಲಾಖೆಯ ಶೋಧದ ಸಮಯದಲ್ಲಿ, ನಟ ಮತ್ತು ಆತನ ಸಹಚರರು ತೆರಿಗೆ ವಂಚನೆ ನಡೆಸಿರುವ ಬಗ್ಗೆ ಸಾಕ್ಷ್ಯಗಳು ದೊರೆತಿವೆ. ನಟ ಓನು ಸೂದ್ ತಮ್ಮ ಲೆಕ್ಕವಿಲ್ಲದ ಆದಾಯವನ್ನು ನಕಲಿ ವಿಧಾನದಲ್ಲಿ ಸಾಲದ ರೂಪದಲ್ಲಿ ಪಡೆದಿದ್ದಾರೆ” ಎಂದು ಇಲಾಖೆ ಹೇಳಿಕೆಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: ಕೇಜ್ರಿವಾಲ್ ಭೇಟಿ ಬೆನ್ನಲ್ಲೇ ಸೋನು ಸೂದ್‌ ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ

“ಸೋನುಸೂದ್ ಅವರಿಗೆ ಸೇರಿದ ಸಂಸ್ಥೆ ಹಾಗೂ ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವೆ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ತೆರಿಗೆಯನ್ನು ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಸಮೀಕ್ಷೆ ಮಾಡಲಾಗಿದೆ” ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿದ್ದವು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಸೋನುಸೂದ್ ಅವರನ್ನು ಶಾಲಾ ವಿದ್ಯಾರ್ಥಿಗಳ ಕಾರ್ಯಕ್ರಮಗಳಿಗೆ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಕೇಜ್ರಿವಾಲ್‌ ಅವರನ್ನು ಸೂದ್ ಭೇಟಿಯಾಗಿದ್ದರು. ಆಮ್‌ಆದ್ಮಿ ಮೂಲಕ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ವಿಚಾರವನ್ನು ಸೂದ್‌ ನಿರಾಕರಿಸಿದ್ದರು.

ಕೊರೊನಾ ಸಂದರ್ಭದಲ್ಲಿ ಸೋನು ಸೂದ್ ಮಾಡಿದ ಮಾನವೀಯ ಕೆಲಸಗಳು ಗಮನ ಸೆಳೆದಿದ್ದವು. ಅವರು ಅಪಾರ ಪ್ರಶಂಸೆಗಳಿಗೂ ಅವರು ಪಾತ್ರರಾಗಿದ್ದರು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ ಡೌನ್ ಘೋಷಣೆಯಾದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ ಹಾಗೂ ವಿಮಾನ ಸೌಲಭ್ಯವನ್ನು ಸೂದ್  ಕಲ್ಪಿಸಿದ್ದರು. ಎರಡನೇ ಅಲೆಯ ವೇಳೆ ರೋಗಿಗಳಿಗೆ ಆಮ್ಲಜನಕ ದೊರಕಿಸಲು ಕೈ ಜೋಡಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಸೂದ್ ಚಾರಿಟಿ ಫೌಂಡೇಶನ್, ಈ ವರ್ಷದ ಏಪ್ರಿಲ್ ಒಳಗೆ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಲಾಗಿದೆ. ಉಳಿದ 17 ಕೋಟಿ ರೂಪಾಯಿಗಳನ್ನು ಸೂದ್ ಚಾರಿಟಿ ಫೌಂಡೇಶನ್ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಹಾಗೆ ಉಳಿದಿದೆ ಎನ್ನಲಾಗಿದೆ.


ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...