Homeಕರೋನಾ ತಲ್ಲಣನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

’ಜನರ ಬೇಡಿಕೆಗಳನ್ನು ಈಡೇರಿಸುವುದಕ್ಕಿಂತಲೂ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹೆಚ್ಚು ಮುಖ್ಯ ಎಂದು ನಾನು ನಂಬುತ್ತೇನೆ’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಮಾಡಲು ಏಕಾಏಕಿ ಲಾಕ್‌ಡೌನ್ ಘೋಷಿಸಿದ್ದ ಕೇಂದ್ರ ಸರ್ಕಾರದ ಕ್ರಮದಿಂದ ನಿರ್ಗತಿಕರಾದ ಲಕ್ಷಾಂತರ ಜನರ ಪಾಲಿಗೆ ಆಪತ್ಬಾಂದವರಾಗಿದ್ದು ನಟ ಸೋನು ಸೂದ್. ಈಗ ಮತ್ತೊಂದು ಕಾರ್ಯಕ್ಕೆ ಕೈ ಹಾಕಿದ್ದು, ನಿರುದ್ಯೋಗಿಗಳಿಗೆ ಇ-ಆಟೋಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ.

ಖುದ್ ಕಮಾವೋ ಘರ್​ ಚಲಾವೋ (ನೀವೇ ಗಳಿಸಿ ಮನೆ ನಡೆಸಿ) ಎಂಬ ಹೆಸರಿನಲ್ಲಿ ಹೊಸದೊಂದು ಯೋಜನೆ ಆರಂಭಿಸಲು ಮುಂದಾಗಿರುವ ಸೋನು ಸೂದ್, ಲಾಕ್​ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾದವರಿಗೆ ಎಲೆಕ್ಟ್ರಾನಿಕ್ ಆಟೋಗಳನ್ನ ನೀಡಲು ಮುಂದಾಗಿದ್ದಾರೆ.

ಇ- ಆಟೋಗಳ ಮೂಲಕ ನಿರುದ್ಯೋಗಿಗಳು ಸ್ವ ಉದ್ಯೋಗಿಗಳಾಗಲಿದ್ದು ತಮ್ಮ ಮನೆ ನಡೆಸಲು ತಾವೇ ದುಡಿಯಬಹುದು. ಈ ಮೂಲಕ ಅವರಿಗೆ ಸಹಾಯವಾಗಲಿದೆ ಎಂದು ಈ ಯೋಜನೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

View this post on Instagram

 

“ಕಳೆದ ಕೆಲವು ತಿಂಗಳುಗಳಿಂದ ನಾನು ಜನರಿಂದ ಸಾಕಷ್ಟು ಪ್ರೀತಿಯನ್ನು ಪಡೆದುಕೊಂಡಿದ್ದೇನೆ. ಅದು ಅವರಿಗಾಗಿ ಮುಂದುವರಿಯಲು ನನಗೆ ಪ್ರೇರಣೆ ನೀಡಿದೆ. ಆದ್ದರಿಂದ, ನಾನು ’ಖುದ್ ಕಮಾವೋ ಘರ್ ಚಾಲಾವೋ’ ಯೋಜನೆ ಆರಂಭಿಸಿದ್ದೇನೆ ಎಂದು 47 ವರ್ಷದ ನಟ ಹೇಳಿದ್ದಾರೆ.

“ಜನರ ಬೇಡಿಕೆಗಳನ್ನು ಈಡೇರಿಸುವುದಕ್ಕಿಂತಲೂ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹೆಚ್ಚು ಮುಖ್ಯ ಎಂದು ನಾನು ನಂಬುತ್ತೇನೆ. ಈ ಯೋಜನೆ ಅವರನ್ನು ಸ್ವಾವಲಂಬಿಗಳಾಗಿ ಮಾಡುವ ಮೂಲಕ ಮತ್ತೆ ತಮ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಈ ವರ್ಷದ ಆರಂಭದಲ್ಲಿ, ಸೋನು ಸೂದ್ ಅವರು ಪ್ರವಾಸಿ ರೋಜ್​ಗಾರ್ ಆ್ಯಪ್ ಬಿಡುಗಡೆ ಮಾಡಿದ್ದರು. ಇದರಿಂದ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಹೊಡೆತದಿಂದ ಕೆಲಸ ಕಳೆದುಕೊಂಡವರಲ್ಲಿ 50,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿತು. ಪ್ರವಾಸಿ ರೋಜ್​ಗಾರ್ ಆ್ಯಪ್, ಅನೇಕ ಕಂಪನಿಗಳೊಂದಿಗೆ ಸಂಪರ್ಕದಲ್ಲಿದ್ದು,ಕಂಪನಿಗಳಲ್ಲಿ ಖಾಲಿ ಇರುವ ಕೆಲಸದ ಬಗ್ಗೆ ಮಾಹಿತಿ ನೀಡುತ್ತದೆ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...